ಗೊಬ್ಬರಬೆಲೆ ಏರಿಕೆ ಹಿಂಪಡೆಯಿರಿ,ಕಬ್ಬಿನಬೆಳೆ,ಯೂರಿಯಾ ಕೊಡಿ.
ರಸಗೊಬ್ಬರ ಬೆಲೆ ಏರಿಕೆ ಹಿಂಪಡೆಯಿರಿ ಕಬ್ಬಿನ ಬೆಳೆಗೆ ಹಾಕಲು ಯೂರಿಯಾ ಗೊಬ್ಬರ ಕೊಡಿ ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ದಿನೇ ದಿನೇ ಹೆಚ್ಚುತ್ತಿರುವ ರಸಗೊಬ್ಬರ ಬೆಲೆಯನ್ನು ತಕ್ಷಣವೇ ಹಿಂಪಡೆಯಬೇಕು ರಸಗೊಬ್ಬರ ಖರೀದಿಗೆ ಕಡ್ಡಾಯಗೊಳಿಸಿರುವ ಎಫ್ ಐ ಡಿ ನಿಯಮ ರದ್ದುಪಡಿಸುವದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಭಾರತೀಯ ಕೃಷಿ ಕಾರ್ಮಿಕ ರೈತ ಸಂಘಟನೆ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘಟನೆ ಸೇರಿಕೊಂಡು ಜಂಟಿ ಕೃಷಿ ನಿರ್ದೇಶಕರಾದ ಕೆ ಮಲ್ಲಿಕಾರ್ಜುನ್ ಅವರಲ್ಲಿ ಮನವಿ ಮಾಡಲಾಯಿತು. ಸಂಘಟನೆಯ ಜಿಲ್ಲಾಧ್ಯಕ್ಷ…
ವೆನಿಲ್ಲಾ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಆರೋಪಿಗಳ ಪ್ಲಾನ್ ಬಹಿರಂಗ!
ವೆನಿಲ್ಲಾ ಹತ್ಯೆ ಪ್ರಕರಣಕ್ಕೆ ಹೊಸ ತಿರುವು : ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ ಆರೋಪಿಗಳ ಶಾಕಿಂಗ್ ಪ್ಲಾನ್ ಬಹಿರಂಗ,,,! ವೀರಮಾರ್ಗ ನ್ಯೂಸ್ : ಕಾಡುಗೋಡಿ ವ್ಯಾಪ್ತಿಯಲ್ಲಿ ನಾಲ್ಕು ವರ್ಷದ ಬಾಲಕಿ ವೆನಿಲ್ಲಾ ಹತ್ಯೆ ಪ್ರಕರಣವು ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದೆ. ಪ್ರಕರಣದ ತನಿಖೆ ಮುಂದುವರಿದಂತೆ ಬೆಚ್ಚಿಬೀಳಿಸುವ ಮಾಹಿತಿಗಳು ಒಂದೊಂದಾಗಿ ಹೊರಬರುತ್ತಿದ್ದು, ಪೊಲೀಸರು ಪ್ರಮುಖ ಆರೋಪಿಗಳಾದ ಪ್ರಿಯಾಂಕ ಮತ್ತು ಮೋಹನ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆರಂಭದಲ್ಲಿ ಈ ಪ್ರಕರಣವನ್ನು ಅಸಹಜ ಸಾವು (ಯುಡಿಆರ್) ಎಂದು ದಾಖಲಿಸಲಾಗಿತ್ತು….
ಬ್ಯಾಂಕ್ ಉದ್ಯೋಗಿ ಬೆತ್ತಲೆ ಸ್ಥಿತಿಯಲ್ಲಿ ಹೆಣವಾಗಿ ಪತ್ತೆ!
ಬ್ಯಾಂಕ್ ಉದ್ಯೋಗಿ ಬೆತ್ತಲೆ ಸ್ಥಿತಿಯಲ್ಲಿ ಹೆಣವಾಗಿ ಪತ್ತೆ! ಶಾಕಿಂಗ್ ನ್ಯೂಸ್: ಸ್ನೇಹಿತರೊಂದಿಗೆ ಪಾರ್ಟಿಗೆ ಹೋದ ಬ್ಯಾಂಕ್ ಉದ್ಯೋಗಿ ಬೆತ್ತಲೆ ಸ್ಥಿತಿಯಲ್ಲಿ ಹೆಣವಾಗಿ ಪತ್ತೆ! ಕೊಲೆಯೋ? ಅಪಘಾತವೋ? ವೀರಮಾರ್ಗ ನ್ಯೂಸ್ : ಬಳ್ಳಾರಿ : ಸ್ನೇಹಿತರೊಂದಿಗೆ ವೀಕೆಂಡ್ ಪಾರ್ಟಿಗೆಂದು ತೆರಳಿದ್ದ ಮಹಿಳೆಯೊಬ್ಬರು ಭೀಕರ ಹಾಗೂ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಗಣಿ ನಾಡು ಬಳ್ಳಾರಿಯಲ್ಲಿ ಇಡೀ ಜಿಲ್ಲೆಯನ್ನೇ ನಡುಗಿಸಿದೆ. ಬಳ್ಳಾರಿಯ ಹಂದ್ರಾಳ್ ಹಳ್ಳದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಯಾರು ಈ ಮಹಿಳೆ? ಏನಿದು ಘಟನೆ?…
ಕಾರಟಗಿಯಲ್ಲಿ ಕೆಆರ್ಎಸ್ ಪಕ್ಷದ ಲಂಚಮುಕ್ತ ಅಭಿಯಾನ.
ಕಾರಟಗಿಯಲ್ಲಿ ಕೆಆರ್ಎಸ್ ಪಕ್ಷದ ಲಂಚಮುಕ್ತ ಅಭಿಯಾನ. ಪೊಲೀಸ್ ಠಾಣೆ ಹಾಗೂ ಪುರಸಭೆಗೆ ಮನವಿ ಸಲ್ಲಿಕೆ. ವೀರಮಾರ್ಗ ನ್ಯೂಸ್ : ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಪೊಲೀಸ್ ಠಾಣೆ ಮತ್ತು ಪುರಸಭೆಯಲ್ಲಿ ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ವತಿಯಿಂದ “ಲಂಚಮುಕ್ತ ಕರ್ನಾಟಕ” ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.ಸಾರ್ವಜನಿಕರಿಗೆ ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಕೆಲಸಕ್ಕಾಗಿ ಲಂಚ ನೀಡುವ ಅಥವಾ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಬಾರದು. ಸರ್ಕಾರಿ ಸೇವೆಗಳು ಪಾರದರ್ಶಕವಾಗಿ ಮತ್ತು ಸಮಯಕ್ಕೆ ಸರಿಯಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಕೆಆರ್ಎಸ್ ಪಕ್ಷದ ಕಾರ್ಯಕರ್ತರು…
ಪತ್ರಕರ್ತರ ಮೇಲಿನ ಹಲ್ಲೆ ಪ್ರಜಾಪ್ರಭುತ್ವದ ಮೇಲಿನ ದಾಳಿ :
ಪತ್ರಕರ್ತರ ಮೇಲಿನ ಹಲ್ಲೆ; ಪ್ರಜಾಪ್ರಭುತ್ವದ ಮೇಲಿನ ದಾಳಿ: ಸತ್ಯದ ಹೋರಾಟಕ್ಕೆ ಸಿಕ್ಕ ಜಯ ವರದಿ : ಚಂದ್ರಶೇಖರ ಎಂ. ಹಿರೇಮಠ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕೋದ್ಯಮವು ನಾಲ್ಕನೇ ಅಂಗವೆಂದು ಪರಿಗಣಿಸಲಾಗಿದೆ. ಸರ್ಕಾರ, ಆಡಳಿತ ಮತ್ತು ಸಮಾಜದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಪತ್ರಕರ್ತರು ಜನರ ಧ್ವನಿಯನ್ನು ಆಡಳಿತದ ಗಮನಕ್ಕೆ ತರುವ ಮಹತ್ತರ ಜವಾಬ್ದಾರಿಯನ್ನು ನಿರ್ವಹಿಸುತ್ತಾರೆ. ಇಂತಹ ಸಂದರ್ಭದಲ್ಲಿ ಪತ್ರಕರ್ತರ ಮೇಲೆ ನಡೆಯುವ ಹಲ್ಲೆಗಳು ಕೇವಲ ಒಬ್ಬ ವ್ಯಕ್ತಿಯ ಮೇಲಿನ ದೌರ್ಜನ್ಯವಲ್ಲ, ಅದು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲಿನ ನೇರ ದಾಳಿಯಾಗಿದೆ. ಧಾರವಾಡ…
ಡಿಪ್ಲೋಮಾ ಇನ್ ವಾಸ್ತು ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್.
ಡಿಪ್ಲೋಮಾ ಇನ್ ವಾಸ್ತು ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ ಹಿರೇಕೆರೂರ ತಾಲೂಕು : ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಇತ್ತೀಚೆಗೆ ನಡೆಸಿದ ಡಿಪ್ಲೋಮಾ ಇನ್ ವಾಸ್ತು ಪರೀಕ್ಷೆಯಲ್ಲಿ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕಿನ ವಾಸ್ತು ಸಲಹೆಗಾರರು ಹಾಗೂ ಧಾರ್ಮಿಕ ವಿದ್ವಾಂಸರಾದ ವೇ. ಶ್ರೀ ಚನ್ನೇಶ ಶಾಸ್ತ್ರಿಗಳು ಮಠದ ಅವರು ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಇವರು ಶ್ರೀ ಭಾಸ್ಕರಾಚಾರ್ಯ ಜ್ಯೋತಿರ್ವಿದ್ಯಾ ಪ್ರತಿಷ್ಠಾನ, ದಾವಣಗೆರೆ ಸಂಸ್ಥೆಯ ಮೂಲಕ ಪರೀಕ್ಷೆಗೆ…
ಮಲಗಿದ್ದ ಮಹಿಳೆಯೊಬ್ಬಳ ಕತ್ತು ಸೀಳಿ ಬರ್ಬರ ಹತ್ಯೆ.
ವೀರಮಾರ್ಗ ನ್ಯೂಸ್ : ಮನೆಯಲ್ಲಿ ಮಲಗಿದ್ದ ವಿವಾಹಿತ ಮಹಿಳೆಯೊಬ್ಬಳ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಕಂದವಾರ ಬಾಗಿಲು ಬಡಾವಣೆಯಲ್ಲಿ ನಡೆದಿದೆ. ದುಷ್ಕರ್ಮಿಗಳು ಆಕೆಯ ಕೊರಳಿನಲ್ಲಿದ್ದ ಮಾಂಗಲ್ಯ ಸರದೊಂದಿಗೆ ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಇದು ಸರಗಳ್ಳತನಕ್ಕಾಗಿ ನಡೆದ ಕೊಲೆ ಎಂದು ಬಿಂಬಿತವಾಗುತ್ತಿದ್ದರೂ, ಮೃತಳ ಪೋಷಕರು ಮಾತ್ರ ಇದು ಗಂಡನ ಮನೆಯವರೇ ಸ್ಕೆಚ್ ಹಾಕಿ ಮಾಡಿಸಿರುವ ‘ವ್ಯವಸ್ಥಿತ ಸುಪಾರಿ ಕೊಲೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಧ್ಯರಾತ್ರಿ ನಡೆದಿದ್ದೇನು? ಒಳನುಗ್ಗಿದ ದರೋಡೆಕೋರರು!ಸ್ಥಳೀಯ ಮೇಸ್ತ್ರಿ ನರಸಿಂಹಮೂರ್ತಿ ಎಂಬುವರ…
ಕಣ್ಣಿಗೆ ಖಾರದಪುಡಿ ಎರಚಿ ಒಂದೇ ಕುಟುಂಬದವರ ಬರ್ಬರ ಹತ್ಯೆ!
ವೀರಮಾರ್ಗ ನ್ಯೂಸ್ : ವಿಜಯಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಹಳೆಯ ಆಸ್ತಿ ವಿವಾದ ಹಾಗೂ ವೈಷಮ್ಯದ ಹಿನ್ನೆಲೆಯಲ್ಲಿ, ದುಷ್ಕರ್ಮಿಗಳ ತಂಡವೊಂದು ಕಣ್ಣಿಗೆ ಖಾರದ ಪುಡಿ ಎರಚಿ, ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಕುಟುಂಬದ ಆರು ಜನರನ್ನು ಬರ್ಬರವಾಗಿ ಕೊಲೆ ಮಾಡಿದೆ. ಈ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಭೀಮಾ ನದಿ ತೀರದ ಗೋವಿಂದಪುರ ಗ್ರಾಮದಲ್ಲಿ ನಡೆದಿದ್ದು, ಇಡೀ ಜಿಲ್ಲೆಯನ್ನು ನಡುಗಿಸಿದೆ. ಚಡಚಣ ಪಟ್ಟಣದ ಒಂದೇ ಕುಟುಂಬಕ್ಕೆ ಸೇರಿದ ದುಂಡಪ್ಪ ನಿರಾಳೆ (65), ಶಿವಪುತ್ರ ನಿರಾಳೆ…
ಆಟೋ ಚಾಲಕ 53 ವರ್ಷ ಕಾಂಪೌಂಡ್ ಕುಸಿದು ಸಾವು.
ವೀರಮಾರ್ಗ ನ್ಯೂಸ್ : ಬೆಂಗಳೂರಿನ ವಿಜಯನಗರದಲ್ಲಿ ದಾರುಣ ಘಟನೆಯೊಂದು ನಡೆದು ಹೋಗಿದೆ. ಆಟೋ ಚಾಲಕ 53 ವರ್ಷದ ಶಿವಬೋರಯ್ಯ ಎಂಬುವರು ಕಾಂಪೌಂಡ್ ಕುಸಿದು … ಇಹಲೋಕ ತ್ಯಜಿಸಿದ್ದಾರೆ. ಪತ್ನಿ, ಮಕ್ಕಳನ್ನು ಆಸ್ಪತ್ರೆಗೆ ಬಿಟ್ಟು ಹೊರಕ್ಕೆ ಬಂದ ಶಿವಬೋರಯ್ಯ ಆಟೋ ತೆಗೆದುಕೊಂಡು ಹೊರಟಾಗ, ಮೂತ್ರಕ್ಕೆ ಅವಸರ ಆಗಿದೆ. ಮಳೆ ಬಂದು ನಿಂತಿತ್ತು. ಚಳಿ ಬೇರೆ.. ಸೂಸು ಮಾಡಲು ಕಾಂಪೌಂಡ್ ಪಕ್ಕಕ್ಕೆ ಹೋಗಿದ್ದಾರೆ. ದುರಾದೃಷ್ಟವಶಾತ್ ಕಾಂಪೌಂಡ್ ಕುಸಿದಿದೆ. ಇತ್ತೀಚೆಗೆ ಮಗಳನ್ನ ಕಳೆದುಕೊಂಡಿದ್ದ ಶಿವಬೋರಯ್ಯಗೆ ಒಬ್ಬ ಮಗ, ಹೆಂಡತಿ ಮತ್ತು ವಯಸ್ಸಾದ…
ನಿವೃತ್ತಿಗೆ ಮೂರೇ ದಿನ ಬಾಕಿ ಇರುವಾಗ ಅಧಿಕಾರಿಗೆ ಶಾಕ್.
ವೀರಮಾರ್ಗ ನ್ಯೂಸ್ : ತುಮಕೂರು ಜಿಲ್ಲಾ : ನಿವೃತ್ತಿಗೆ ಮೂರೇ ದಿನ ಬಾಕಿ ಇರುವಾಗ ಅಧಿಕಾರಿಗೆ ಶಾಕ್. ಕೋಟ್ಯಂತರ ರೂಪಾಯಿ ಅವ್ಯವಹಾರ ಆರೋಪ, ಇಒ ದೊಡ್ಡಸಿದ್ದಯ್ಯ ಸಸ್ಪೆಂಡ್. ಭಾನುವಾರ ನಿವೃತ್ತಿಯಾಗಬೇಕಿದ್ದ ಚಿಕ್ಕನಾಯಕನಹಳ್ಳಿ ಇಒ ದೊಡ್ಡಸಿದ್ದಯ್ಯ ಅಮಾನತು. ಮಧುಗಿರಿಯಲ್ಲಿ ಇಒ ಆಗಿದ್ದಾಗ ಬರೋಬ್ಬರಿ 4.5 ಕೋಟಿ ರೂ. ಭ್ರಷ್ಟಾಚಾರ ನಡೆಸಿದ ಆರೋಪ. ನಿವೃತ್ತ ನೌಕರರ ಗಳಿಕೆ ರಜೆ ನಗದೀಕರಣದಲ್ಲಿ ಕೋಟಿ ಕೋಟಿ ಲೂಟಿ ಹೊಡೆದಿದ್ದ ದೊಡ್ಡಸಿದ್ದಯ್ಯ. ಗಂಭೀರ ಆರೋಪ ಹಿನ್ನೆಲೆ ನಿನ್ನೆ ರಾತ್ರಿಯೇ ಅಮಾನತು ಆದೇಶ ಹೊರಡಿಸಿದ ಸರ್ಕಾರ….