ಒಳಮೀಸಲಾತಿ ಜಾರಿಗೊಳಿಸಿ ಇಲ್ಲವಾದರೆ ಕುರ್ಚಿ ಖಾಲಿ ಮಾಡಿ : ಕೊಡ್ಲಿ
ವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಒಳ ಮೀಸಲಾತಿ ನೀಡುವದಕ್ಕೆ ಕಳೆದ ೩ ದಶಕಗಳಿಂದ ಮಾಡುತ್ತಿರುವ ಹೋರಾಟಕ್ಕೆ ಯಾವುದೇ ಪಕ್ಷಗಳು ಗಮನ ಹರಿಸುತ್ತಿಲ್ಲ, ಬರಿ ಮೂಗಿಗೆ ತುಪ್ಪ ಹಚ್ಚುವ ಕಾರ್ಯ ಮಾಡುತ್ತಿದ್ದು, ಈಗೀರುವ ಸರಕಾರವು ಸಹ ಯಾವುದೇ ರೀತಿ ಸ್ಪಂದನೆ ನೀಡುತ್ತಿಲ್ಲ, ಶೀಘ್ರ ಒಳಮೀಸಲಾತಿ ಜಾರಿಗೊಳಿಸಿ ಇಲ್ಲವಾದರೆ ಕುರ್ಚಿ ಖಾಲಿ ಮಾಡಿ ಎಂದು ಕ್ರಾಂತಿಕಾರಿ ರಥಯಾತ್ರೆ ನೇತೃತ್ವ ವಹಿಸಿದ್ದ ಪ್ರಭುರಾಜ್ ಕೊಡ್ಲಿ ಒತ್ತಾಯಿಸಿದರು.

ಅವರು ಸಮೀಪದ ಶಿಗ್ಲಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಮಾದಿಗ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿ ಒಳಮಿಸಲಾತಿ ಜಾರಿಗಾಗಿ ಹೋರಾಟಗಳನ್ನು ನಡೆಸುತ್ತಾ ಬರುತ್ತಿದ್ದರು ಯಾವುದೇ ಸರಕಾರ ಕ್ರಮ ಕೈಗೊಳ್ಳುತ್ತಿರುವುದು ನೋವಿನ ಸಂಗತಿಯಾಗಿದೆ. ಹೊಸ ನೇಮಕಾತಿ, ಮುಂಬಡ್ತಿ ಮತ್ತು ಬ್ಯಾಕಲಾಗ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವುದು ಬೇಡ. ಒಳ ಮೀಸಲಾತಿ ಜಾರಿಗೊಳಿಸುವವರೆಗೂ ಯಾವುದೇ ಕಾರಣಕ್ಕೂ ನೇಮಕಾತಿ ಮಾಡಬಾರದು. ಮಾದಿಗ ಸಮುದಾಯಕ್ಕೆ ಅನ್ಯಾಯವಾಗುತ್ತಿರುವುದನ್ನು ತಪ್ಪಿಸಬೇಕು, ಮಾದಿಗ ಸಮುದಾಯದ ಶಾಸಕರು ಸಚಿವರು ಸಚಿವ ಸಂಪುಟದಲ್ಲಿ ಧ್ವನಿಯೆತ್ತಬೇಕು ಎಂದು ಆಗ್ರಹಿಸಿದ ಅವರು ಒಳ ಮೀಸಲಾತಿ ಜಾರಿಗೊಳಿಸಿದ ನಂತರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಹೇಳಿದರು.
ಕ್ರಾಂತಿಕಾರಿ ಹೋರಾಟಗಾರರ ಮಲ್ಲೇಶ ಮಾತನಾಡಿ, ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ, ಸಮುದಾಯದ ಹೋರಾಟಗಾರ ಪ್ರೊಫೆಸರ್ ಬಿ. ಕೃಷ್ಣಪ್ಪ ರವರ ಸಮಾಧಿ ಸ್ಥಳದಿಂದ ಕ್ರಾಂತಿಕಾರಿ ರಥಯಾತ್ರೆ, ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೂ ಜರುಗುತ್ತಿದೆ ಎಂದರು. ಜಾತಿ ಗಣತಿ ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಪ್ರತಿಯೊಬ್ಬರೂ ಜಾತಿ ದಾಖಲಾತಿ ಮಾಡುವ ಸಂದರ್ಭದಲ್ಲಿ ಮಾದಿಗ, ಮಾದರ್ ಅಂತ ಸ್ಪಷ್ಟವಾಗಿ ಪೆನ್ನಿನಿಂದ ಬರೆದುಕೊಳ್ಳುವಂತೆ ಹೇಳಬೇಕು. ಹರಿಜನ ಎಂಬ ಶಬ್ದವನ್ನು ಜಾತಿ ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಬರೆಯಿಸಕೂಡದು. ಒಳ ಮೀಸಲಾತಿ ಜಾರಿಯಾಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂಬ ಸ್ಪಷ್ಟ ನಿಲುವನ್ನ ನುಡಿದರು.
ಕ್ರಾಂತಿಕಾರಿ ರಥಯಾತ್ರೆಯೂ ತಾಲೂಕಿಗೆ ಆಗಮಿಸುತ್ತಿದ್ದಂತೆ ಲಕ್ಷ್ಮೇಶ್ವರ ಹಾಗೂ ಶಿಗ್ಲಿ ಗ್ರಾಮದಲ್ಲಿ ಮಾದಿಗ ಸಮಾಜದ ಮುಖಂಡರು, ಯುವಕರು ಅದ್ದೂರಿಯಿಂದ ಸ್ವಾಗತಿಸಿದರು ಶಿಗ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯು ತಮಟೆ ಶಬ್ದದೊಂದಿಗೆ ಜೈ ಜೈ ಮಾದಿಗ.. ಜೈ ಜೈ ಅಂಬೇಡ್ಕರ್.. ಎಂಬ ಘೋಷಣೆ ಮುಗಿಲು ಮುಟ್ಟಿತ್ತು.
ಈ ಸಂದರ್ಭದಲ್ಲಿ ಮುಖಂಡರಾದ ಎನ್.ಡಿ ಮೇಗಲಮನಿ, ಹನುಮಂತ ಛಬ್ಬಿ, ಕರಿಯಪ್ಪ ಶಿರಹಟ್ಟಿ, ಮೈಲಾರಪ್ಪ ಡಿ ಎಚ್, ಚಂದ್ರು ಕರ್ಜಗಿ, ಮನೋಹರ್ ಕರ್ಜಗಿ, ಶಿವಾನಂದ ಮೇಗಲಮನಿ, ಮಾರ್ಥಂಡಪ್ಪ ಗಾಳಪ್ಪನವರ್, ಸೋಮಣ್ಣ ಯತ್ತಿನಹಳ್ಳಿ, ಗುಡ್ಡಪ್ಪ ಮತ್ತೂರ್, ಬಸವರಾಜ ಹೊಸಮನಿ ಸೇರಿದಂತೆ ಅಂಬೇಡ್ಕರ್ ನಗರದ ನೂರಾರು ಮಹಿಳೆಯರು, ಯುವಕರು ಹಾಗೂ ಸಮುದಾಯದ ಮುಖಂಡರು ಇದ್ದರು.