ಏ.೨೭ರೊಳಗೆ ಭಾರತ ಬಿಟ್ಟು ತೆರಳಿ, ಪಾಕ್ ಪ್ರಜೆಗಳಿಗೆ ಕೇಂದ್ರದ ಖಡಕ್ ಎಚ್ಚರಿಕೆ
ವೀರಮಾರ್ಗ ನ್ಯೂಸ್ ನವದೆಹಲಿ : ಇದೇ ಏ.೨೭ರೊಳಗೆ ಭಾರತ ಬಿಟ್ಟು ತೊಲಗುವಂತೆ ಪಾಕ್ ಪ್ರಜೆಗಳಿಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.
ಜಮ್ಮು ಕಾಶ್ಮೀರದ ಪಹಗ್ಲಾಮ್ ನಲ್ಲಿ ಉಗ್ರರ ದಾಳಿ ನಡೆದ ಬೆನ್ನಲ್ಲೇ ಪಾಕಿಸ್ತಾನ ಪ್ರಜೆಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಪಾಕ್ ಪ್ರಜೆಗಳ ಎಲ್ಲಾ ರೀತಿಯ ವೀಸಾಗಳನ್ನು ಸರ್ಕಾರ ಇಂದು ಸ್ಥಗಿತಗೊಳಿಸಿದ್ದು, ಮೆಡಿಕಲ್ ವೀಸಾಗಳಿಗೆ ಏ.೨೯ರವೆಗೆ ಅವಕಾಶ ಕಲ್ಪಿಸಿದೆ.

ಎಲ್ಲಾ ರೀತಿಯ ವೀಸಾಗಳನ್ನು ಗುರುವಾರ ಸ್ಥಗಿತಗೊಳಿಸಿದ್ದು, ಏ.೨೭ರೊಳಗೆ ಭಾರತ ತೊರೆಯುವಂತೆ ಸೂಚಿಸಿದೆ. ವೈದ್ಯಕೀಯ ವೀಸಾಗಳು ಏ.೨೯ರವರೆಗೆ ಮಾನ್ಯವಾಗಿ ರಲಿದ್ದು, ಬಳಿಕ ರದ್ದಾಗಲಿವೆ ಎಂದು ತಿಳಿಸಿದೆ.
ಪೈಶಾಚಿಕ ಭಯೋತ್ಪಾದಕ ದಾಳಿಯ ಬಳಿಕ ಸಚಿವ ಸಂಪುಟ ಹಲವು ಭದ್ರತೆಯ ಕುರಿತಾದ ನಿರ್ಧಾರಗಳನ್ನು ಕೈಗೊಂಡಿದೆ. ಈ ನಿರ್ಧಾರದ ಮುಂದುವರಿದ ಭಾಗವಾಗಿ ಕೇಂದ್ರ ಸರ್ಕಾರ ತಕ್ಷಣವೇ ಎಲ್ಲಾ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ ಎಂದು ತಿಳಿಸಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಿಸಿಎಸ್ ಸಭೆಯ ನಂತರ, ಸರ್ಕಾರ ಪಾಕಿಸ್ತಾನಿ ಪ್ರಜೆಗಳ ಸಾರ್ಕ್ ವೀಸಾಗಳನ್ನು ಸ್ಥಗಿತಗೊಳಿಸಿತ್ತು. ಸಾರ್ಕ್ ವೀಸಾ ವಿನಾಯಿತಿ ಯೋಜನೆಯಡಿಯಲ್ಲಿ ಪಾಕ್ ಪ್ರಜೆಗಳಿಗೆ ಭಾರತಕ್ಕೆ ಪ್ರಯಾಣಿಸಲು ಅವಕಾಶವಿರುವುದಿಲ್ಲ ಮತ್ತು ಈ ಹಿಂದೆ ನೀಡಿದ್ದ ಎಲ್ಲಾ ಎಸ್ಪಿಇಎಸ್ ವೀಸಾಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ತಿಳಿಸಿತ್ತು. ಪ್ರಸ್ತುತ ಎಸ್ಪಿಇಎಸ್ ವೀಸಾದಡಿಯಲ್ಲಿ ಭಾರತದಲ್ಲಿರುವ ಎಲ್ಲ ಪಾಕಿಸ್ತಾನಿ ಪ್ರಜೆಗಳು ೪೮ ಗಂಟೆಯೊಳಗೆ ಭಾರತವನ್ನು ತೊರೆಯಲು ಕಾಲಾವಕಾಶವಿದೆ ಎಂದು ತಿಳಿಸಿದರು.
