ಕಾವೇರಿ ರಕ್ಷಿಸಲು ಹೋರಾಟದ ಜೊತೆ ಮನವಿ.

ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುವದರ ಮೂಲಕ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳು ಡಿ ಕೆ ಶಿವಕುಮಾರ ಅವರಿಗೆ ಹಾಗೂ ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಸಚಿವರಾದ ರಾಮಲಿಂಗರೆಡ್ಡಿ ಅವರಿಗೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕವು ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ನೀಡಿರುವ ನಿರ್ದೇಶನವು ಸಂಪೂರ್ಣವಾಗಿ ಅವೈಜ್ಞಾನಿಕ, ವಾಸ್ತವ ಪರಿಸ್ಥಿತಿಯನ್ನು ನಿರ್ಲಕ್ಷಿಸಿರುವ ಹಾಗೂ ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ ಆದೇಶವಾಗಿದೆ ಎಂದು ಮಾನ್ಯ ತಹಸೀಲ್ದಾರ್ ಅವರ ಅನುಪ ಸ್ಥಿತಿಯಲ್ಲಿ ಗ್ರೇಡ್ ಟು ತಹಸೀಲ್ದಾರ್ ಅರುಣ ಕಾರಗಿ ಇವರ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.

ರಾಜ್ಯಾಧ್ಯಕ್ಷರಾದ ಶ್ರೀ ನಿತ್ಯಾನಂದ ಜಿ ಕುಂದಾಪುರ ಮಾತನಾಡಿ ಈ ವರ್ಷ ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ. ಕೆಆರ್‌ಎಸ್‌, ಕಬಿನಿ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಳವಳಕಾರಿ ಮಟ್ಟದಲ್ಲಿದೆ. ಈಗಿರುವ ನೀರು ರಾಜ್ಯದ ಜನರ ಕುಡಿಯುವ ನೀರಿನ ಅಗತ್ಯವನ್ನೇ ಸಂಪೂರ್ಣವಾಗಿ ಪೂರೈಸಲು ಸಾಕಾಗದ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಕರ್ನಾಟಕದಿಂದ ನಾಲ್ಕೂವರೆ ಟಿಎಂಸಿಗೂ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶಿಸುವುದು ವಾಸ್ತವ ಸ್ಥಿತಿಗೆ ಕಣ್ಣು ಮುಚ್ಚಿಕೊಂಡು ತೆಗೆದುಕೊಂಡ ನಿರ್ಧಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಜಾಧವ ಮಾತನಾಡಿ ಕುಡಿಯುವ ನೀರು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು. ಅದರ ಜೊತೆಗೆ ರಾಜ್ಯದ ರೈತರ ಬೆಳೆ ಹಾಗೂ ಜೀವನೋಪಾಯವನ್ನು ರಕ್ಷಿಸುವುದು ಕರ್ನಾಟಕ ಸರ್ಕಾರದ ಮೊದಲ ಜವಾಬ್ದಾರಿಯಾಗಿದೆ. ರಾಜ್ಯದ ಜನರ ಅಗತ್ಯಗಳನ್ನು ಕಡೆಗಣಿಸಿ ನೀರು ಹರಿಸುವುದು ಯಾವುದೇ ದೃಷ್ಟಿಯಿಂದಲೂ ನ್ಯಾಯಸಮ್ಮತವಲ್ಲ. ಆದ್ದರಿಂದ ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ಈ ಆದೇಶವನ್ನು ಪಾಲಿಸಬಾರದು ಮತ್ತು ಒಂದು ಹನಿ ನೀರನ್ನೂ ತಮಿಳುನಾಡಿಗೆ ಬಿಡುಗಡೆ ಮಾಡಬಾರದು ಎಂದರು

ಜಿಲ್ಲಾ ಗೌರವ ಉಪಾಧ್ಯಕ್ಷರು ವಿ ಎಸ್ ಹಿರೇಮಠ ಮಾತನಾಡಿ ರಾಜ್ಯ ಸರ್ಕಾರ ತಕ್ಷಣವೇ ಈ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ದ ಮುಂದೆ ಪ್ರಶ್ನಿಸಿ, ಕರ್ನಾಟಕದ ವಾಸ್ತವ ಜಲಸ್ಥಿತಿಯನ್ನು ಸಮಗ್ರವಾಗಿ ಮಂಡಿಸಬೇಕು. ಅಗತ್ಯವಿದ್ದರೆ ಮುಂದಿನ ಕಾನೂನುಬದ್ಧ ಕ್ರಮಗಳನ್ನು ಕೈಗೊಂಡು ರಾಜ್ಯದ ಹಕ್ಕು ಮತ್ತು ಜನರ ಹಿತಾಸಕ್ತಿಯನ್ನು ರಕ್ಷಿಸಬೇಕು.

ಒಂದು ವೇಳೆ ಈ ಅವೈಜ್ಞಾನಿಕ ಆದೇಶವನ್ನು ಅನುಸರಿಸಿ ಕರ್ನಾಟಕ ಸರ್ಕಾರ ನೀರು ಬಿಡುಗಡೆ ಮಾಡಿದರೆ, ಅದರ ವಿರುದ್ಧ ರಾಜ್ಯಾದ್ಯಂತ, ವಿಶೇಷವಾಗಿ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ತೀವ್ರ ಜನಾಕ್ರೋಶ ವ್ಯಕ್ತವಾಗುವ ಸಾಧ್ಯತೆಯಿದೆ. ಇಂತಹ ಪರಿಸ್ಥಿತಿಗೆ ಸರ್ಕಾರವೇ ನೇರ ಹೊಣೆಗಾರವಾಗಲಿದೆ.

ತಾಲೂಕ ಅಧ್ಯಕ್ಷರು ಚಂದ್ರಪ್ಪ ಬಣಕಾರ ಮಾತನಾಡಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಈ ಆದೇಶವನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ರಾಜ್ಯದ ಹಿತಾಸಕ್ತಿ, ರೈತರ ಬದುಕು ಹಾಗೂ ಕುಡಿಯುವ ನೀರಿನ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಈ ಆದೇಶದ ವಿರುದ್ಧ ರಾಜ್ಯಾದ್ಯಂತ ತೀವ್ರ ಸ್ವರೂಪದ ಪ್ರಜಾಸತ್ತಾತ್ಮಕ ಹೋರಾಟವನ್ನು ಸಂಘಟಿಸಲಿದೆ. ಸರ್ಕಾರ ರಾಜ್ಯದ ಜನರ ಭಾವನೆಗಳಿಗೆ ಗೌರವ ನೀಡಿ, ಕರ್ನಾಟಕದ ಹಿತಾಸಕ್ತಿಯನ್ನು ಅಗ್ರಸ್ಥಾನದಲ್ಲಿರಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತದೆ.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರು ಸಿದ್ದರೋಡ ಗುರುo ಮಲ್ಲಿಕಾರ್ಜುನ ಸಾವಕ್ಕಳವರ ಪರಶುರಾಮ ಕುರುವತ್ತಿ ಆನಂದ ಲಮಾಣಿ ಗೋಪಿ ಕುಂದಾಪುರ ಶಂಕರ ಹಳ್ಳಪ್ಪನವರ ಮರಡೆಪ್ಪ ಚಳಗೇರಿ ಭಾಷಾ ಹಂಪಪಟ್ಟಣ ಕೃಷ್ಣ ವೇಷಗಾರ ಶ್ರೀಕಾಂತಪ್ಪ ಕಡ್ಲಿಗೊಂದಿ ಮತ್ತಿತರರು ಉಪಸ್ಥಿತರಿದ್ದರು.