ಏ.೧ ರಿಂದಲೇ ಉದ್ಯೋಗ ಖಾತರಿ ಯೋಜನೆಯಡಿ ದಿನಗೂಲಿಗಾರರಿಗೆ ರೂ.೩೭೦ ಕೂಲಿ ನಿಗದಿ

ಏ.೧ ರಿಂದಲೇ ಉದ್ಯೋಗ ಖಾತರಿ ಯೋಜನೆಯಡಿ ದಿನಗೂಲಿಗಾರರಿಗೆ ರೂ.೩೭೦ ಕೂಲಿ ನಿಗದಿ
ವೀರಮಾರ್ಗ ನ್ಯೂಸ್ ಹಾವೇರಿ :
ಮಹಾತ್ಮ ಗಾಂಧಿ – ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಏಪ್ರಿಲ್ ೧ ರಿಂದ ಒಂದು ದಿನಕ್ಕೆ ರೂ. 370 ಕೂಲಿ ನಿಗದಿಪಡಿಸಲಾಗಿದೆ. ಈ ’ಯೋಜನೆಯಡಿ ಅರ್ಹ ನೋಂದಾಯಿತ ಕುಟುಂಬಗಳಿಗೆ ಕೇಂದ್ರ ಸರ್ಕಾರವು ರೂ. 349 ರಿಂದ ರೂ. 370ಕ್ಕೆ ಕೂಲಿ ದರ ಹೆಚ್ಚಿಸಿದೆ. ತಾಲೂಕಿನ ಎಲ್ಲಾ ಗ್ರಾಮದ ಅರ್ಹ ನೋಂದಾಯಿತ ಕೂಲಿ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ ಎಂದು ತಾಲ್ಲೂಕು ಪಂಚಾಯಿತಿ ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನವೀನ್ ಪ್ರಸಾದ್ ಕಟ್ಟಿಮನಿ ತಿಳಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಕರ್ಯ ಒದಗಿಸುವುದು, ನೈಸರ್ಗಿಕ ಸಂಪನ್ಮೂಲ ಬಲ ಪಡಿಸುವುದು, ವಲಸೆ ತಡೆಗಟ್ಟುವುದು, ಆರ್ಥಿಕ ಭದ್ರತೆ ಒದಗಿಸುವುದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ನೈಸರ್ಗಿಕ ಸಂಪನ್ಮೂಲ ನಿರ್ವಹಣಾ ಕಾಮಗಾರಿಗಳಿಗೆ ಆದ್ಯತೆಯನ್ನು ನೀಡಲಾಗಿದ್ದು, ಜನರಿಗೆ ಕೆರೆ, ಹಳ್ಳ, ಕಾಲುವೆ ಹುಳೆತ್ತುವುದು, ಅಮೃತ ಸರೋವರ ಹಾಗೂ ಜಲ ಸಂಜೀವಿನಿ ಕಾಮಗಾರಿಗಳಾದ ಕೃಷಿ ಹೊಂಡ, ಬದು ನಿರ್ಮಾಣ, ಕೊಳವೆ ಬಾವಿ ನಾಲಾ ಅಭಿವೃದ್ಧಿ, ಅರಣೀಕರಣ ಹೀಗೆ ಹಲವು ಕಾಮಗಾರಿಗಳನ್ನು ಕೂಲಿ ಕಾರ್ಮಿಕರು ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಬೇಸಿಗೆ ಕಾಲದಲ್ಲಿ ಕೂಲಿ ಕಾರ್ಮಿಕರು ಉದ್ಯೋಗ ಅರಸಿ ಗುಳೆ ಹೋಗುವುದನ್ನು ಬಿಟ್ಟು, ನಿಮ್ಮ ಸ್ವಂತ ಊರಿನಲ್ಲಿಯೇ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿ ನೆಮ್ಮದಿಯ ಜೀವನ ನಡೆಸುವುದರ ಜತೆಗೆ ಆರ್ಥಿಕವಾಗಿ ಸಬಲರಾಗಬೇಕು. ತಾಲೂಕಿನ ಕೂಲಿ ಕಾರ್ಮಿಕರು ಕೂಲಿ ಬೇಡಿಕೆಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದುಕೊಂಡು ಈ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *