ಪಹಲ್ಗಾಮ್ ಭಯೋತ್ಪಾದಕರದು ಹೇಯ, ಹೇಡಿತನದ ಕೃತ್ಯ: ಮಂದಾಲಿ
ವೀರಮಾರ್ಗ ನ್ಯೂಸ್ ಗದಗ : ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿ ಅತ್ಯಂತ ಹೇಯ ಮತ್ತು ಬರ್ಬರವಾಗಿದೆ. ಉಗ್ರರ ಈ ಹೇಡಿ ಕೃತ್ಯವನ್ನು ಪ್ರತಿಯೊಬ್ಬರೂ ಬಲವಾಗಿ ಖಂಡಿಸಬೇಕು ಎಂದು ಗದಗ ತಾಲೂಕು ಗ್ಯಾರಂಟಿ ಅನು?ನ ಪ್ರಾಧಿಕಾರದ ಅಧ್ಯಕ್ಷ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರಾದ ಅಶೋಕ ಮಂದಾಲಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಣಿವೆ ರಾಜ್ಯದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ನಡೆಸಿರುವ ದಾಳಿ ಅತ್ಯಂತ ಹೇಯ ಮತ್ತು ಹೇಡಿತನದ ಕೃತ್ಯವಾಗಿದೆ. ಇದಕ್ಕೆ ಕಾರಣರಾದ ಉಗ್ರಗಾಮಿಗಳನ್ನು ಯಾವ ಮುಲಾಜೂ ಇಲ್ಲದೆ ಸದೆಬಡಿಯುವ ಕೆಲಸ ಆಗಬೇಕು.
ನೂರಾರು ಜನ ಪ್ರವಾಸಿಗರು ಇದ್ದ ಜಾಗದಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ, ಸುರಕ್ಷತೆ ಇರಲಿಲ್ಲವೇ ಎಂಬ ಪ್ರಶ್ನೆ ಉದ್ಭವಿಸುತ್ತಿದೆ. ಇದು ಕೇಂದ್ರ ಸರ್ಕಾರ ಮತ್ತು ಜಮ್ಮು ಕಾಶ್ಮೀರ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ಬೇಹುಗಾರಿಕೆ ವೈಫಲ್ಯವೇ ಉಗ್ರರ ದಾಳಿಗೆ ಪ್ರಮುಖ ಕಾರಣವಾಗಿದೆ.
ಕೇಂದ್ರ ಹಾಗೂ ಕಾಶ್ಮೀರ ರಾಜ್ಯ ಸರ್ಕಾರದ ಜವಾಬ್ದಾರಿಯಾಗಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಈ ಜವಾಬ್ದಾರಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
