
ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆದ ಛಾಯದೇವಿ ವಿದ್ಯಾನಿಕೇತನ ಪ್ರೌಢಶಾಲೆಯ ವಾರ್ಷಿಕೋತ್ಸವ. ಮಕ್ಕಳ ನೃತ್ಯವನ್ನು ಕಣ್ತುಂಬಿಕೊಂಡ ಪೋಷಕರು. ಬಣ್ಣ ಬಣ್ಣದ ವಿದ್ಯುತ್ ದೀಪಗಳ ಬೆಳಕಿನಲ್ಲಿ ನೃತ್ಯ ಮಾಡಿ ರಂಜಿಸಿದ ಪುಟಾಣಿ ಮಕ್ಕಳು
ವಿದ್ಯಾರ್ಥಿಗಳು ಶಿಸ್ತು ಸಂಯಮವನ್ನು ಜೀವನದಲ್ಲಿ ಅಳವಡಿಸಿಕೊಂಡು ಏಕಾಗ್ರತೆಯಿಂದ ಅಭ್ಯಾಸ ಮಾಡಿ ಸಾಧನೆ ಮಾಡಬೇಕು ಎಂದು ಮೈಸೂರು ಮಹಾ ನಗರ ಪಾಲಿಕೆಯ ಮಾಜಿ ಮೇಯರ್ ಸಂದೇಶ್ ಸ್ವಾಮಿ ಹೇಳಿದರು ಅವರು ಕೆ. ಆರ್. ಪೇಟೆ ಪಟ್ಟಣದ ಹೊರ ವಲಯದ ಪುರ ಗೇಟ್ ನಲ್ಲಿರುವ ಶ್ರೀ ಛಾಯಾದೇವಿ ವಿದ್ಯಾನಿಕೇತನ ಹಾಗೂ ಬಾನುಪ್ರಕಾಶ್ ಪ್ರೌಢ ಶಾಲೆಯ 18ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಓದಿನ ಸಮಯದಲ್ಲಿ ಮನಸ್ಸನ್ನು ಅಲ್ಲಿಂದಲ್ಲಿ ಹರಿಯಬಿಡದೇ ಏಕಾಗ್ರತೆಯಿಂದ ತಲೆ ಬಗ್ಗಿಸಿ…