ವೀರ ಮಾರ್ಗ

ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ರಾಯರೆಡ್ಡಿ ಸರ್ಟಿಫಿಕೇಟ್ ನೀಡಿದ್ದಾರೆ : ಅಶೋಕ್

ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ರಾಯರೆಡ್ಡಿ ಸರ್ಟಿಫಿಕೇಟ್ ನೀಡಿದ್ದಾರೆ : ಅಶೋಕ್ವೀರಮಾರ್ಗ ನ್ಯೂಸ್ ಬೆಂಗಳೂರು : ಗ್ಯಾರಂಟಿಗಳಿಂದ ಸರ್ಕಾರ ದಿವಾಳಿಯಾಗಿದೆ ಎಂದು ಒಪ್ಪಿಕೊಂಡಿದ್ದ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಈಗ ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ೧ ಎಂದು ಒಪ್ಪಿಕೊಳ್ಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸರ್ಟಿಫಿಕೇಟ್ ನೀಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸರ್ಕಾರದ ವಿರುದ್ಧ ಪೋಸ್ಟ್…

Read More

ಏ.೧೬, ೧೭ ರಂದು ಸಿಇಟಿ ಪರೀಕ್ಷೆ, ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ

ಏ.೧೬, ೧೭ ರಂದು ಸಿಇಟಿ ಪರೀಕ್ಷೆ, ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆವೀರಮಾರ್ಗ ನ್ಯೂಸ್ ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಏ.೧೬ ಮತ್ತು ೧೭ರಂದು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಯುಜಿಸಿಇಟಿ)ಯ ಪರೀಕ್ಷಾಕೇಂದ್ರಗಳ ೨೦೦ ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದ್ದು, ಹತ್ತಿರದಲ್ಲಿರುವ ಎಲ್ಲಾ ಜೆರಾಕ್?ಸ ಅಂಗಡಿಗಳನ್ನು ಮುಚ್ಚುವಂತೆ ಪ್ರತಿಬಂಧಕಾಜ್ಞೆ ವಿಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಆದೇಶಿಸಿದ್ದಾರೆ.ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ ಅವರು ಈ ಆದೇಶ ಹೊರಡಿಸಿದ್ದು,…

Read More

ಹಾವೇರಿ-ದಾವಣಗೆರೆ ಸೇರಿ ರಾಜ್ಯದ ಹಲವೆಡೆ ಇಂದು, ನಾಳೆ ಮಳೆ ಸಾಧ್ಯತೆ

ಹಾವೇರಿ-ದಾವಣಗೆರೆ ಸೇರಿ ರಾಜ್ಯದ ಹಲವೆಡೆ ಇಂದು, ನಾಳೆ ಮಳೆ ಸಾಧ್ಯತೆವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆ ನಗರದಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಗಳಿವೆ.ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆ. ನಿನ್ನೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾವೇರಿ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಕೆಲವೆಡೆ ಮಳೆಯಾಗಿದೆ.ಹವಾಮಾನ ಮುನ್ಸೂಚನೆ ಪ್ರಕಾರ ಮೋಡ…

Read More

ಸಚಿವರಿಗೆ ದಕ್ಷತೆಯ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

ಸಚಿವರಿಗೆ ದಕ್ಷತೆಯ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯವೀರಮಾರ್ಗ ನ್ಯೂಸ್ ಬೆಂಗಳೂರು : ಪ್ರತಿಯೊಬ್ಬ ಸಚಿವರೂ ತಮ ಇಲಾಖೆಯನ್ನು ಚೆನ್ನಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಆಡಳಿತದಲ್ಲಿ ಹಿಡಿತ ಹಾಗೂ ದಕ್ಷತೆ ಬರಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ೩೬ನೇ ರಾಷ್ಟ್ರೀಯ ಭೂ ಮಾಪನ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆಯಿದ್ದಂತೆ ರೈತರ ಜೊತೆ ನೇರ ಸಂಪರ್ಕ ಇದೆ. ಅತೀ ಹೆಚ್ಚು ಅರ್ಜಿಗಳು ಬರುವುದು ಈ ಇಲಾಖೆಗೆ….

Read More

ಲಾರಿ ಮಾಲೀಕರ ಮುಷ್ಕರಕ್ಕೆ ಚಾಲಕರ ಯೂನಿಯನ್ ಬೆಂಬಲ

ಲಾರಿ ಮಾಲೀಕರ ಮುಷ್ಕರಕ್ಕೆ ಚಾಲಕರ ಯೂನಿಯನ್ ಬೆಂಬಲವೀರಮಾರ್ಗ ನ್ಯೂಸ್ ಬೆಂಗಳೂರು : ಡೀಸೆಲ್, ಟೋಲ್ ದರ ಏರಿಕೆ ಖಂಡಿಸಿ ಏ.೧೫ ರಿಂದ ಲಾರಿ ಮಾಲೀಕರ ಸಂಘ ಕರೆ ನೀಡಿರುವ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ನಮ್ಮ ಬೆಂಬಲವಿದೆ ಎಂದು ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಹೇಳಿದ್ದಾರೆ.ಮುಷ್ಕರವನ್ನು ಬೆಂಬಲಿಸಿ ರಾಜ್ಯದಲ್ಲಿ ಚಾಲಕರು ವಾಹನಗಳ ಸಂಚಾರವನ್ನು ಬಂದ್ ಮಾಡಲಿದ್ದಾರೆ. ಡಿಸೇಲ್ ಬೆಲೆ ೭ ತಿಂಗಳಲ್ಲಿ ೫ರೂ ಏರಿಕೆಯಾಗಿದೆ. ಈಗಾಗಲೇ ಟೋಲ್ ದರ ದುಬಾರಿಯಾಗಿದ್ದು, ಹೆದ್ದಾರಿಗಳಲ್ಲಿ…

Read More

ಹಿರೇಮುಗದೂರ ಗ್ರಾಪಂನಲ್ಲಿ ಮಹಾವೀರ ಜಯಂತಿ

ಹಿರೇಮುಗದೂರ ಗ್ರಾಪಂನಲ್ಲಿ ಮಹಾವೀರ ಜಯಂತಿವೀರಮಾರ್ಗ ನ್ಯೂಸ್ ಸವಣೂರು : ತಾಲ್ಲೂಕಿನ ಹಿರೇಮುಗದೂರ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಶ್ರೀ ವರ್ಧಮಾನ ಮಹಾವೀರರ ಜಯಂತಿಯನ್ನು ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ನಿಂಗಪ್ಪ ಎಂ ಆರೇರ, ಗ್ರಾಪಂ ಕಾರ್ಯದರ್ಶಿ ಹನುಮಂತಪ್ಪ ಸಂಗೂರ, ಅಡಿವೆಪ್ಪ ಯಲ್ಲಣ್ಣನವರ, ಗುಡ್ಡಪ್ಪ ಆರೇರ, ಸ್ವಚ್ಚ ವಾಹಿನಿ ಸಿಬ್ಬಂದಿಗಳಾದ ನೇತ್ರಾ ಹರಿಜನ, ಸುಧಾ ಹೊಸಮನಿ, ಲಕ್ಷ್ಮೀ ತಳವಾರ, ಲಲಿತಾ ಕಾಳಿ, ನಿರಂಜನ, ವೀನುತಾ ಸೇರಿದಂತೆ ಅನೇಕರಿದ್ದರು.

Read More

ಅಹಿಂಸಾ ಪರಮೋ ಧರ್ಮ ಎಂದು ಸಾರಿದವರು ಮಹಾವೀರರು : ಡಿಸಿ ಶ್ರೀಧರ

ಗದಗ ಜಿಲ್ಲಾಡಳಿತದಲ್ಲಿ ಭಗವಾನ ಶ್ರೀ ಮಹಾವೀರ ಜಯಂತಿಅಹಿಂಸಾ ಪರಮೋ ಧರ್ಮ ಎಂದು ಸಾರಿದವರು ಮಹಾವೀರರು : ಡಿಸಿ ಶ್ರೀಧರವೀರಮಾರ್ಗ ನ್ಯೂಸ್ ಗದಗ : ಪ್ರಾಣಿ ಹಿಂಸೆ ಮಹಾಪಾಪ, ಅಹಿಂಸಾ ಪರಮೋ ಧರ್ಮ ಎಂದು ಸಾರಿದವರು ಭಗವಾನ ಶ್ರೀ ಮಹಾವೀರರು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಹೇಳಿದರು.ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಹಯೋಗದಲ್ಲಿ ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಗುರುವಾರ ಏರ್ಪಡಿಸಲಾದ ಭಗವಾನ್ ಶ್ರೀ…

Read More

ನಾಳೆ ಹಾವಳಿಯಲ್ಲಿ ಹನುಮ ಜಯಂತಿ, ಧರ್ಮಸಭೆ

ನಾಳೆ ಹಾವಳಿಯಲ್ಲಿ ಹನುಮ ಜಯಂತಿ, ಧರ್ಮಸಭೆವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಏ ೧೨ಶನಿವಾರ ದಂದು ಹಾವಳಿ ಆಂಜನೇಯ ದೇವಸ್ಥಾನದಲ್ಲಿ ಹನುಮ ಜಯಂತಿ ಹಾಗೂ ಧರ್ಮಸಭೆ ನಡೆಯಲಿದೆ.ಪಟ್ಟಣದ ಪೇಟೆ ಶ್ರೀ ಹಾವಳಿ ಆಂಜನೇಯ ಟ್ರಸ್ಟ್ (ರಿ), ಹಿಂದೂ ಮಹಾಸಭಾ ಗಣಪತಿ ಸೇವಾ ಮಂಡಳಿ ಇವರ ವತಿಯಿಂದ ಹನುಮ ಜಯಂತಿ ಪ್ರಯುಕ್ತ ಪ್ರತಿವರ್ಷದಂತೆ ಈ ವರ್ಷವು ಶ್ರೀ ಬಾಲ ಆಂಜನೇಯ ತೊಟ್ಟಿಲೋತ್ಸವ ನಿಮಿತ್ಯ ಏ ೧೨ ಶನಿವಾರದಂದು ನಡೆಯಲಿದೆ.ಅಂದು ಬೆಳಿಗ್ಗೆ ೬ಗಂಟೆಯಿಂದ ರುದ್ರಾಭಿಷೇಕ, ಪಾಲಕಿ ಉತ್ಸವ ತೊಟ್ಟಿಲೋತ್ಸವ ಸುಮಂಗಲಿಯರಿಗೆ ಉಡಿ…

Read More

ರಾಜಭೋಗ ತ್ಯಜಿಸಿ, ಅಹಿಂಸಾ ಮಾರ್ಗದಿಂದ ಜೀವನ ಸಾಕ್ಷಾತ್ಕಾರ : ವಾಸುದೇವ

ರಾಜಭೋಗ ತ್ಯಜಿಸಿ, ಅಹಿಂಸಾ ಮಾರ್ಗದಿಂದ ಜೀವನ ಸಾಕ್ಷಾತ್ಕಾರ : ವಾಸುದೇವವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಭಗವಾನ್ ಮಹಾವೀರರು ರಾಜ ಭೋಗಗಳನ್ನು ತ್ಯಜಿಸಿ ಅಹಿಂಸಾ ಮಾರ್ಗದ ಮೂಲಕ ಜೀವನವನ್ನು ಸಾಕ್ಷಾತ್ಕಾರಗೊಳಿಸಿದವರು ಎಂದು ತಹಸೀಲ್ದಾರ ವಾಸುದೇವ ವಿ. ಸ್ವಾಮಿ ಹೇಳಿದರು.ಅವರು ತಾಲೂಕ ಆಡಳಿತ ವತಿಯಿಂದ ತಹಸೀಲ್ದಾರ ಕಚೇರಿಯಲ್ಲಿ ಮಹಾವೀರ ಜಯಂತಿ ಪ್ರಯುಕ್ತ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಉದ್ದೇಶಿಸಿ ಮಾತನಾಡುತ್ತ ಅಹಿಂಸೆ, ಸತ್ಯ, ಮತ್ತು ತಪಸ್ಸಿನ ಮಾರ್ಗವನ್ನು ತೋರಿದರು ಅವರ ವಿಚಾರಗಳು ತತ್ವಜ್ಞಾನ ಬದುಕಿನ ಪ್ರಾಮಾಣಿಕತೆ ಸದಾ ಸ್ಫೂರ್ತಿದಾಯಕ ಭಗವಾನ್…

Read More

ಲಕ್ಷ್ಮೇಶ್ವರ : ರಾಷ್ಟ್ರಮಟ್ಟದ ಕೋಡ್ ಪಿಯಸ್ಟಾ ೫.೦

ಲಕ್ಷ್ಮೇಶ್ವರ : ರಾಷ್ಟ್ರಮಟ್ಟದ ಕೋಡ್ ಪಿಯಸ್ಟಾ ೫.೦ವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಪಟ್ಟಣದ ಶ್ರೀಮತಿ ಕಮಲಾ ಮತ್ತು ಶ್ರೀ ವೆಂಕಪ್ಪ ಎಂ ಅಗಡಿ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ರಾಷ್ಟ್ರಮಟ್ಟದ ಕೋಡ್ ಪಿಯಸ್ಟಾ ೫.೦ ನಿರಂತರ ೨೪ ತಾಸುಗಳ ಹ್ಯಾಕಥಾನ ಸ್ಪರ್ಧೆ ಇತ್ತೀಚಿಗೆ ಜರುಗಿತು.ಬೆಳಗಾವಿಯ ಕೆ ಎಲ್ ಎಸ್ ಗೊಗಟೆ ಇಂಜಿನಿಯರಿಂಗ್ ಕಾಲೇಜಿನ ಕೌಶಲ ಎಸ್ ಕೇದಾರಿ ಮತ್ತು ತಂಡದ ಸದಸ್ಯರು ಪ್ರಥಮ ಸ್ಥಾನ, ಹುಲಕೋಟಿಯ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಿ ಲೈನಾ ಮತ್ತು ತಂಡದ…

Read More