ವೀರ ಮಾರ್ಗ

ಹಿರೇಮುಗದೂರ ಗ್ರಾಮದ ಪ್ರಾ.ಕೃ.ಪ.ಸ. ಸಂಘಕ್ಕೆ ಅಧ್ಯಕ್ಷರಾಗಿ ಪರಶುರಾಮ ಆರೇರ, ಉಪಾಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮಾ ಸೋಮಸಾಗರ ಆಯ್ಕೆ

ವೀರಮಾರ್ಗ ನ್ಯೂಸ್ ಸವಣೂರು : ಸಹಕಾರ ಕ್ಷೇತ್ರದಲ್ಲಿ ನನಗೆ ಸೇವೆ ಮಾಡಲು ಅವಕಾಶ ನೀಡಿದ ಎಲ್ಲಾ ಸಹಕಾರಿಗಳಿಗೆ ಹಾಗೂ ಸಹಕಾರ ನೀಡಿದ ಎಲ್ಲಾ ಗುರು ಹಿರಿಯರಿಗೆ ಧನ್ಯವಾದಗಳು ಎಂದು ಶ್ರೀ ದುರ್ಗಾಂಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾದ ಪರಶುರಾಮ ಮಾ. ಆರೇರ ಹೇಳಿದರು. ತಾಲ್ಲೂಕಿನ ಹಿರೇಮುಗದೂರ ಗ್ರಾಮದ ಶ್ರೀ ದುರ್ಗಾಂಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾಗಿ ಅವರು ಎಲ್ಲರೂ ಕೃತಜ್ಞತೆ ಸಲ್ಲಿಸಿ ಅವರು ಮಾತನಾಡಿದರು. ನಮ್ಮೂರ ಹಾಗೂ ಸುತ್ತಮುತ್ತಲಿನ…

Read More

ಏಪ್ರಿಲ್ ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಚುನಾವಣೆ : ಯಾರಾಗಲಿದ್ದಾರೆ ಸಾರಥಿ..?

ಬೆಂಗಳೂರು : ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ವೇದಿಕೆ ಸಿದ್ದಗೊಳ್ಳುತ್ತಿದ್ದು, ಏಪ್ರಿಲ್ ತಿಂಗಳಲ್ಲಿ ಬಿಜೆಪಿ ಸಾರಥಿ ಯಾರು? ಎನ್ನುವುದು ಸ್ಪಷ್ಟವಾಗಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಯ ಬಳಿಕವೇ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕಾತಿಗೆ ಚಾಲನೆ ದೊರೆಯಲಿದೆ.ಏಪ್ರಿಲ್ ಮೊದಲ ವಾರದಲ್ಲಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಇದಾದ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅಥವಾ ಆವಿರೋಧ ಆಯ್ಕೆ ನಡೆಯುವ ಸಾಧ್ಯತೆ ಗೋಚರಿಸಿದೆ. ರಾಜ್ಯ ಬಿಜೆಪಿ ಅಧ್ಯಕ್ಷರ ಚುನಾವಣೆ ನಡೆಸಲು ಅನುಕೂಲವಾಗುವಂತೆ ಜಿಲ್ಲಾ ಬಿಜೆಪಿ…

Read More

೯ ತಿಂಗಳ ಬಾಹ್ಯಾಕಾಶ ವಾಸ ಅಂತ್ಯ : ಸುರಕ್ಷಿತವಾಗಿ ಭುವಿಗಳಿದ ಸುನಿತಾ, ಬುಚ್

ವಾಷಿಂಗ್ಟನ್ : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಕ್ಷೇಮವಾಗಿ ವಾಪಸ್ ಆಗಿರುವ ನಾಲ್ವರು ಗಗನಯಾತ್ರಿಗಳನ್ನು ನಾಸಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಗಗನಯಾತ್ರಿಗಳನ್ನು ಅವರು ಧರಿಸಿದ್ದ ವಿಶೇಷ ಸ್ಪೇಸ್‌ ಸೂಟ್ ನಲ್ಲೇ ಹೆಲಿಕಾಪ್ಟರ್ ಮೂಲಕ ಅವರನ್ನು ನಾನಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇಷ್ಟು ದಿನ ಬಾಹ್ಯಾಕಾಶದಲ್ಲಿದ್ದ ಕಾರಣ ಇಲ್ಲಿನ ವಾತಾವರಣಕ್ಕೆ ಗಗನಯಾತ್ರಿಗಳು ಹೊಂದಿಕೊಳ್ಳಬೇಕಿದೆ. ಅವರ ಆರೋಗ್ಯ ಸ್ಥಿತಿ ಸ್ಪಂದಿಸಬೇಕಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತೆ. ಸಮಗ್ರವಾಗಿ ತಪಾಸಣೆಗೆ ಒಳಪಡಿಸಲಾಗುತ್ತದೆ ಎಂದು ನಾಸಾ ತಿಳಿಸಿದೆ.ಕಡಲ ತೀರದ ಮೇಲೆ ಇಳಿದ ನೌಕೆಯಿಂದ…

Read More

ರಾಜ್ಯಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿದ್ದಾರೆ : ಸ್ಪೀಕರ್ ಗರಂ

ವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿ ದ್ದಾರೆ ಎಂದು ಸಭಾಧ್ಯಕ್ಷ ಯು.ಟಿ. ಖಾದರ್ ವಿಧಾನಸಭೆಗೆ ತಿಳಿಸಿದರು. ಕಾನೂನು ಮತ್ತು ಸುವ್ಯವಸ್ಥೆ ಕುರಿತು ವಿರೋಧಪಕ್ಷದ ನಾಯಕ ಆರ್. ಅಶೋಕ, ವಿಷಯ ಪ್ರಸ್ತಾಪಿಸುತ್ತಾ ಸದನದಲ್ಲಿ ಸಚಿವರಿಲ್ಲ. ಇದ್ದ ಒಬ್ಬ ಸಚಿವರು ಎದ್ದು ಹೊರ ನಡೆದಿದ್ದಾರೆ.ಒಬ್ಬಳೇ ಪದಾವತಿ ಎನ್ನುವಂತಾಗಿದೆ ಎಂದು ಆಕ್ಷೇಪಿಸಿದರು.ಆಗ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಸರ್ಕಾರದ ಕಾರ್ಯಕಲಾಪಗಳು ನಡೆಯಲು ಅವಕಾಶ ಮಾಡಿಕೊಡಿ ಎಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು. ಆ ಸಂದರ್ಭದಲ್ಲಿ ಮಾತನಾಡಿದ…

Read More

ತೊಟ್ಟಿಲು ತೂಗುವ ಕೈ ದೇಶವನ್ನೇ ಆಳಬಲ್ಲದು: ಡಾ. ರಂಜಿತಾ

ವೀರಮಾರ್ಗ ನ್ಯೂಸ್ ಗದಗ : ಲಕ್ಷ್ಮೇಶ್ವರ ಇಲ್ಲಿನ ಅಕ್ಕಮಹಾದೇವಿ ದೇವಸ್ಥಾನದಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು, ತಾಲ್ಲೂಕು ಕದಳಿ ಮಹಿಳಾ ವೇದಿಕೆ ಇವರ ಆಶ್ರಯದಲ್ಲಿ ಅಂತರರಾಷ್ಟ್ರಿಯ ಮಹಿಳಾ ದಿನ ಆಚರಿಸಲಾಯಿತು.ಡಾ.ರಂಜಿತಾ ಎನ್. ಮಲ್ಲಾಡದ ಮಾತನಾಡಿ, ಇಂದು ಎಲ್ಲ ಕ್ಷೇತ್ರಗಳಲ್ಲೂ ಮಹಿಳೆ ತನ್ನ ಹೆಜ್ಜೆ ಮೂಡಿಸುತ್ತಿದ್ದಾಳೆ. ತೊಟ್ಟಿಲು ತೂಗುವ ಕೈ ದೇಶವನ್ನೇ ಆಳಬಲ್ಲದು ಎಂಬುದಕ್ಕೆ ಇಂದಿನ ಮಹಿಳೆಯರು ಸಾಕ್ಷಿ ಆಗಿದ್ದಾರೆ. ಆದರೆ ಆಕೆ ಸಾಧನೆ ಮಾಡಲು ಪ್ರೋತ್ಸಾಹ ಅಗತ್ಯ. ಕುಟುಂಬದ ಸದಸ್ಯರು ಅವಳಿಗೆ ಆಸರೆಯಾಗಿ ನಿಂತರ ಎಂಥ ಕೆಲಸವನ್ನಾದರೂ…

Read More

ಕಿಲ್ಲಾ ಚಂದ್ರಸಾಲಿ ಸರಕಾರಿ ಕಾಮ-ರತಿ ಉತ್ಸವವನ್ನು ಶಾಂತತೆಯಿಂದ ಆಚರಿಸಬೇಕು : ಸಿಪಿಐ ಡಿ.ಬಿ. ಪಾಟೀಲ

ವೀರಮಾರ್ಗ ನ್ಯೂಸ್ ಗದಗ : ನಗರದ ಕಿಲ್ಲಾ ಚಂದ್ರಸಾಲಿಯ ಸರಕಾರಿ ಕಾಮ-ರತಿ ಉತ್ಸವವು ಗದಗ ಜಿಲ್ಲೆಗೆ ಕಿರೀಟ ಇದ್ದ ಹಾಗೆ ನವಲಗುಂದದ ರಾಮಲೀಂಗೇಶ್ವರ ಕಾಮ-ರತಿ ಉತ್ಸವ ನಂತರ ಅತಿ ಹೆಚ್ಚು ಪ್ರಸಿದ್ದಿ ಪಡದಿರುವ ಕಾಮ-ರತಿ ಉತ್ಸವ ಇದಾಗಿದೆ ಎಂದು ಗದಗ ಶಹರ ಪೊಲೀಸ್ ಠಾಣೆಯ ಸಿಪಿಐ ಡಿ.ಬಿ. ಪಾಟೀಲ ಅವರು ಹೇಳಿದರು.ನಗರದ ಕಿಲ್ಲಾ ಓಣಿಯ ತ್ರಿಕೂಟೇಶ್ವರ ದೇವಸ್ಥಾನದ ಉತ್ತರ ದಿಕ್ಕಿನ ದ್ವಾರದ ಆವರಣದಲ್ಲಿ 160ನೇ ವರ್ಷದ ಕಿಲ್ಲಾ ಚಂದ್ರಸಾಲಿಯ ಸರಕಾರಿ ಕಾಮ-ರತಿ ಉತ್ಸವ ಸಮಿತಿಯಿಂದ ಹಮ್ಮಿಕೊಂಡ ಶಾಂತಿ…

Read More

ರಂಗುರಂಗಿನ ಬಣ್ಣ ದಾಟದಲ್ಲಿ ಮಿಂದೆದ್ದ ಪತ್ರಕರ್ತರು

ವೀರಮಾರ್ಗ ನ್ಯೂಸ್ ಗದಗ : ದಿನ ಬೆಳಗಾದರೆ ಸಾಕು ಒಂದಿಲ್ಲೊಂದು ಸುದ್ದಿ ಹುಡುಕುತ್ತ ಪಟ್ಟಣ. ಹಾಗೂ ಗ್ರಾಮಗಳಿಗೆ ತೆರಳಿ ಸುದ್ದಿ ಹುಡುಕುವ ಪತ್ರಕರ್ತರು ಒತ್ತಡ ಜೀವನ ನಡೆಸುತ್ತಾರೆ.ಅಂತಹ ಒತ್ತಡದಲ್ಲು ತಾಲೂಕಿನ ಹಿರಿಯ ಹಾಗೂ ಕಿರಿಯ ಪತ್ರಕರ್ತರು ಮಂಗಳವಾರ ಲಕ್ಷ್ಮೇಶ್ವರ ಪಟ್ಟಣದಲ್ಲಿ ಒಂದಾಗಿ ಸೇರಿ ಹೋಳಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಪರಸ್ಪರ ಬಣ್ಣ ಹಚ್ಚುವ ಮೂಲಕ ರಂಗಪಂಚಮಿಗೆ ಮೆರಗು ತಂದರು.ಈ ಸಂತಸದ ಸಮಯವನ್ನು ಕಳೆದು ಎಲ್ಲಾ ಒತ್ತಡಗಳನ್ನು ಮರೆತು ರಂಗುರಂಗಿನ ಬಣ್ಣ ದಾಟದಲ್ಲಿ ಮಿಂದೆದ್ದು ಸಾರ್ವಜನಿಕರ ಗಮನ ಸೆಳೆದರು…

Read More

ದಶಧರ್ಮ ಸೂತ್ರಗಳು ಜೀವನ ವಿಕಾಸಕ್ಕೆ ಅಡಿಪಾಯ : ರಂಭಾಪುರಿಶ್ರೀ

ವೀರಮಾರ್ಗ ನ್ಯೂಸ್ ಅಜ್ಜಂಪುರ : ಭಾವೈಕ್ಯತೆ ಮತ್ತು ಆಧ್ಯಾತ್ಮ ಜ್ಞಾನ ಭಾರತದ ಉಸಿರು. ಸಮಸ್ತ ಜನರ ಭೋಗ ಮೋಕ್ಷಗಳಿಗೆ ಧರ್ಮವೇ ಮೂಲ. ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ಅಹಿಂಸಾದಿ ಧ್ಯಾನ ಪರ್ಯಂತರವಾದ ದಶ ಧರ್ಮ ಸೂತ್ರಗಳು ಜೀವನದ ವಿಕಾಸಕ್ಕೆ ಭದ್ರ ಬುನಾದಿಯಾಗಿವೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಮಂಗಳವಾರ ತಾಲೂಕಿನ ಗಡಿಗಿರಿಯಾಪುರ ಶ್ರೀ ಸಿದ್ದೇಶ್ವರಸ್ವಾಮಿ ಬಯಲು ಸಭಾಂಗಣದಲ್ಲಿ ಜರುಗಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ…

Read More

ಕರ್ನಾಟಕ ಗ್ರಾಮ ಸ್ವರಾಜ್‌ ಹಾಗೂ ಪಂಚಾಯತ್‌ ರಾಜ್‌ ವಿಧೇಯಕ ವಿಧಾನಸಭೆಯಲ್ಲಿ ಮಂಡನೆ

ವೀರಮಾರ್ಗ ನ್ಯೂಸ್ : ಬೆಂಗಳೂರು : ಗ್ರಾಮೀಣ ಭಾಗದಲ್ಲಿ ಕಟ್ಟಡ ನಿರ್ಮಾಣದ ವೇಳೆ ಗ್ರಾಮ ಪಂಚಾಯಿತಿ ಅಥವಾ ಯೋಜನಾ ಪ್ರಾಧಿಕಾರಗಳ ಮೂಲಕ ಲೇಔಟ್‌ ಪ್ಲಾನ್‌ಗೆ ಪೂರ್ವಾನುಮೋದನೆ ಪಡೆದುಕೊಳ್ಳಬೇಕು ಎಂಬ ನಿಯಮವನ್ನೊಳಗೊಂಡ ಕರ್ನಾಟಕ ಗ್ರಾಮ ಸ್ವರಾಜ್‌ ಹಾಗೂ ಪಂಚಾಯತ್‌ ರಾಜ್‌ ವಿಧೇಯಕವನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಪರವಾಗಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ವಿಧೇಯಕವನ್ನು ಮಂಡಿಸಿದರು.ಕಟ್ಟಡ ನಿವೇಶನಗಳಿಗೆ ಹೊಸ ಖಾತೆ ಅಥವಾ ಪಿಐಡಿಯನ್ನು ನೀಡುವ ಮೊದಲು ಲೇಔಟ್‌ ಪ್ಲಾನ್‌ಗೆ…

Read More

ಮಧ್ಯ ವರ್ತಿಗಳಿಂದ ಹಣ ದುರುಪಯೋಗವಾಗದಂತೆ ಮುನ್ನೆಚ್ಚರಿಕೆ ಕ್ರಮ : ಎಂ.ಬಿ. ಪಾಟೀಲ್‌

ವೀರಮಾರ್ಗ ನ್ಯೂಸ್ : ಬೆಂಗಳೂರು : ಕರ್ನಾಟಕ ಸ್ಟೇಟ್‌ ಮಾರ್ಕೆಟಿಂಗ್‌ ಕಮ್ಯುನಿಕೇಷನ್‌ ಆ್ಯಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್‌ನಲ್ಲಿ ಮಧ್ಯ ವರ್ತಿಗಳಿಂದ ಹಣ ದುರುಪಯೋಗವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ವಿಧಾನಪರಿಷತ್‌ನಲ್ಲಿ ತಿಳಿಸಿದರು.ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌‍ನ ಎಸ್‌‍.ಎಲ್‌.ಭೋಜೇಗೌಡ ಅವರು, ಕರ್ನಾಟಕ ಸ್ಟೇಟ್‌ ಮಾರ್ಕೆಟಿಂಗ್‌ ಕಮ್ಯುನಿಕೇಷನ್‌ ಆ್ಯಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್‌ನಲ್ಲಿ ಮಧ್ಯ ವರ್ತಿಗಳಿಂದ ಹಣ ದುರುಪಯೋಗ ಆಗುತ್ತಿದೆ ಎಂದು ಸಚಿವರ ಗಮನಸೆಳೆದರು.ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಹವರ್ತಿಗಳಿಗೆ ಟೆಂಡರ್‌ ನೀಡಲು ಕಾನೂನಿನಲ್ಲಿ ಅವಕಾಶವಿದೆ….

Read More