ರಾಜ್ಯಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿದ್ದಾರೆ : ಸ್ಪೀಕರ್ ಗರಂ
ವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿ ದ್ದಾರೆ ಎಂದು ಸಭಾಧ್ಯಕ್ಷ ಯು.ಟಿ. ಖಾದರ್ ವಿಧಾನಸಭೆಗೆ ತಿಳಿಸಿದರು. ಕಾನೂನು ಮತ್ತು ಸುವ್ಯವಸ್ಥೆ ಕುರಿತು ವಿರೋಧಪಕ್ಷದ ನಾಯಕ ಆರ್. ಅಶೋಕ, ವಿಷಯ ಪ್ರಸ್ತಾಪಿಸುತ್ತಾ ಸದನದಲ್ಲಿ ಸಚಿವರಿಲ್ಲ. ಇದ್ದ ಒಬ್ಬ ಸಚಿವರು ಎದ್ದು ಹೊರ ನಡೆದಿದ್ದಾರೆ.ಒಬ್ಬಳೇ ಪದಾವತಿ ಎನ್ನುವಂತಾಗಿದೆ ಎಂದು ಆಕ್ಷೇಪಿಸಿದರು.ಆಗ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಸರ್ಕಾರದ ಕಾರ್ಯಕಲಾಪಗಳು ನಡೆಯಲು ಅವಕಾಶ ಮಾಡಿಕೊಡಿ ಎಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು. ಆ ಸಂದರ್ಭದಲ್ಲಿ ಮಾತನಾಡಿದ…