ಹೆಣ್ಣುಮಕ್ಕಳು ತಮ್ಮಲ್ಲಿನ ವೃತ್ತಿ ಕೌಶಲ್ಯ ಸದ್ಭಳಕೆ ಮಾಡಿಕೊಳ್ಳಿ.
ಹೆಣ್ಣು ಮಕ್ಕಳು ತಮ್ಮಲ್ಲಿನ ವೃತ್ತಿ ಕೌಶಲ್ಯ ಸದ್ಭಳಕೆ ಮಾಡಿಕೊಂಡು ಗುಡಿಕೈಗಾರಿಕೆ ಸ್ಥಾಪಿಸಿ ಸಾಧನೆ ಮಾಡಿ. ವೀರಮಾರ್ಗ ನ್ಯೂಸ್ : ಕೆ.ಆರ್.ಪೇಟೆ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಉದ್ಯಮಶೀಲ ಮಹಿಳೆ ಶ್ರೀಮತಿ ಅಶ್ವಿನಿ ಶಶಿಭೂಷಣ್, ಪ್ರಕೃತಿ ಸಾವಯವ ಉತ್ಪನ್ನಗಳ ಕಂಪನಿಯ ಸ್ಥಾಪಕರು ಮತ್ತು ಕಾರ್ಯನಿರ್ವಹಣಾಧಿಕಾರಿ ಗಳು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ ಉದ್ಯಮಶೀಲ ಮಹಿಳೆಯರಾಗಲು ಬೇಕಾದ ಗುರಿ, ಬದ್ಧತೆ, ಮಾರುಕಟ್ಟೆ ತಂತ್ರಗಳು, ಆತ್ಮವಿಶ್ವಾಸ ಬಹಳ ಮುಖ್ಯ,…