ಏ.೩೦ ರಂದು ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ

ಏ.೩೦ ರಂದು ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿವೀರಮಾರ್ಗ ನ್ಯೂಸ್ ಗದಗ : ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಏಪ್ರಿಲ್ ೩೦ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಅರ್ಥಪೂರ್ಣವಾಗಿ ಹಾಗೂ ಸುವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಗಜ್ಯೋತಿ ಬಸವೇಶ್ವರ ಜಯಂತಿ ಪ್ರಯುಕ್ತ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕಾರ್ಯಕ್ರಮಕ್ಕೂ ಮುನ್ನ ಜಗಜ್ಯೋತಿ ಬಸವೇಶ್ವರರ ಭಾವಚಿತ್ರಗಳನ್ನೊಳಗೊಂಡ ಮೆರವಣಿಗೆಯು…

Read More

ಹಾವೇರ ಸೇರಿ ದಕ್ಷಿಣ ಒಳನಾಡಿನಲ್ಲಿ ಪೂರ್ವ ಮುಂಗಾರು ಮಳೆ ಮುಂದುವರಿಕೆ

ಹಾವೇರ ಸೇರಿ ದಕ್ಷಿಣ ಒಳನಾಡಿನಲ್ಲಿ ಪೂರ್ವ ಮುಂಗಾರು ಮಳೆ ಮುಂದುವರಿಕೆವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕಾಗಿದ್ದು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ರಾಜ್ಯದ ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ.ಹವಾಮಾನ ಮುನ್ಸೂಚನೆ ಪ್ರಕಾರ ಸಂಜೆ ಹಾಗೂ ರಾತ್ರಿ ವೇಳೆ ರಾಜ್ಯದ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೆಡೆ ಮಿಂಚು, ಗುಡುಗಿನಿಂದ ಕೂಡಿದ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ನಿನ್ನೆ ರಾಜಧಾನಿ ಬೆಂಗಳೂರು, ರಾಮನಗರ, ಬೆಂಗಳೂರು…

Read More

ಜಾತಿ ಜನಗಣತಿ ಅಧ್ಯಯನಕ್ಕೆ ತಜ್ಞರ ಸಮಿತಿ..!?

ಜಾತಿ ಜನಗಣತಿ ಅಧ್ಯಯನಕ್ಕೆ ತಜ್ಞರ ಸಮಿತಿ..!?ವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯದಾದ್ಯಂತ ಭಾರೀ ವಿವಾದದ ಕಿಚ್ಚು ಹಚ್ಚಿರುವ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಸಲ್ಲಿಸಿರುವ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಜನಗಣತಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಎಸ್‌ಇಎಸ್ -೨೦೧೫) ಯಲ್ಲಿನ ಶಿಫಾರಸುಗಳ ಕುರಿತು ಸಂಜೆ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಹೊರ ಬೀಳುವ ಸಾಧ್ಯತೆ ಇದೆ.ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಜನಗಣತಿ ಎಂದು…

Read More

ಸಿಇಟಿ ಪರೀಕ್ಷೆ : ಇದೇ ಮೊದಲ ಬಾರಿಗೆ QR Code ಮೂಲಕ ಮುಖ ಚಹರೆ ಪತ್ತೆ ವ್ಯವಸ್ಥೆ

ಸಿಇಟಿ ಪರೀಕ್ಷೆ : ಇದೇ ಮೊದಲ ಬಾರಿಗೆ QR Code ಮೂಲಕ ಮುಖ ಚಹರೆ ಪತ್ತೆ ವ್ಯವಸ್ಥೆವೀರಮಾರ್ಗ ನ್ಯೂಸ್ ಬೆಂಗಳೂರು : ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯುತ್ತಿರುವ ಬೆಂಗಳೂರಿನ ಮಲ್ಲೇಶ್ವರದ ೧೮ನೇ ಅಡ್ಡರಸ್ತೆಯ ಸರ್ಕಾರಿ ಪಿಯು ಕಾಲೇಜಿನ ಕೇಂದ್ರಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ಇಂದು ಖುದ್ದು ಭೇಟಿ ನೀಡಿ ಪರಿಶೀಲಿಸಿದರು.ಕೆಇಎ ಅಭಿವೃದ್ಧಿಪಡಿಸಿರುವ ಹಾಗೂ ಇದೇ ಮೊದಲ ಬಾರಿಗೆ ಜಾರಿಗೆ ತಂದಿರುವ ಕ್ಯೂಆರ್ ಕೋಡ್ ಮೂಲಕ ಮುಖ ಚಹರೆ ಪತ್ತೆ…

Read More

ಮುಗಿಯದ ಲಾರಿ ಮುಷ್ಕರ, ಅಗತ್ಯ ವಸ್ತುಗಳ ಅಭಾವ

ಮುಗಿಯದ ಲಾರಿ ಮುಷ್ಕರ, ಅಗತ್ಯ ವಸ್ತುಗಳ ಅಭಾವವೀರಮಾರ್ಗ ನ್ಯೂಸ್ ಬೆಂಗಳೂರು : ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಲಾರಿ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಸರಕು ಸಾಗಾಟದಲ್ಲಿ ಭಾರಿ ವ್ಯತ್ಯಯ ಕಂಡು ಬಂದಿದ್ದು ಅಗತ್ಯ ವಸ್ತುಗಳ ಅಭಾವ ತಲೆದೋರಿದೆ.ಲಾರಿಗಳ ಅನಿರ್ದಿಷ್ಟಾವಧಿ ಮುಷ್ಕರದಿಂದ ರೈತರು, ವರ್ತಕರು ವಿವಿಧ ಉದ್ಯಮಿ ಗಳು ಸಂಕಷ್ಟಕ್ಕೆ ಈಡಾಗುವಂತಾಗಿದೆ.ಹೊರ ರಾಜ್ಯಗಳಿಂದ ಬರುವ ಹಣ್ಣು, ತರಕಾರಿ, ಸೊಪ್ಪು,ದಿನನಿತ್ಯದ ಪದಾರ್ಥಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಸರಕು ಸಾಗಣಿಕೆ ವಾಹನಗಳು…

Read More

ಸಮೀಕ್ಷಾ ವರದಿ ಸೋರಿಕೆ ಕುರಿತು ತನಿಖೆಗೆ ಎಚ್‌ಡಿಕೆ ಆಗ್ರಹ

ಸಮೀಕ್ಷಾ ವರದಿ ಸೋರಿಕೆ ಕುರಿತು ತನಿಖೆಗೆ ಎಚ್‌ಡಿಕೆ ಆಗ್ರಹವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯ ಸೋರಿಕೆ ಬಗ್ಗೆ ತಪ್ಪದೇ ತನಿಖೆ ಮಾಡಿಸಿ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಆಯೋಗದಿಂದ ಸೋರಿಕೆ ಆಯಿತಾ? ಅಥವಾ ಸಂಪುಟದಲ್ಲಿ ಸಚಿವರ ಕೈ ಸೇರಿದ…

Read More

ವಿಧೇಯಕಗಳಿಗೆ ಸಹಿ ಹಾಕಲು ರಾಷ್ಟ್ರಪತಿಗಳಿಗೆ ಸುಪ್ರೀಂ ಗಡುವು, ತೀರ್ಪಿನ ಮರು ಪರಿಶೀಲನೆಗೆ ಕೇಂದ್ರ ಅರ್ಜಿ

ವಿಧೇಯಕಗಳಿಗೆ ಸಹಿ ಹಾಕಲು ರಾಷ್ಟ್ರಪತಿಗಳಿಗೆ ಸುಪ್ರೀಂ ಗಡುವು, ತೀರ್ಪಿನ ಮರು ಪರಿಶೀಲನೆಗೆ ಕೇಂದ್ರ ಅರ್ಜಿವೀರಮಾರ್ಗ ನ್ಯೂಸ್ ನವದೆಹಲಿ : ಶಾಸನಸಭೆ ಅಂಗೀಕರಿಸಿದ ವಿಧೇಯಕಗಳಿಗೆ ಅಂಕಿತ ಹಾಕುವ ವಿಚಾರವಾಗಿ ರಾಷ್ಟ್ರಪತಿ ಹಾಗೂ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸಿರುವ ಏಪ್ರಿಲ್ ೮ರ ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಕೇಂದ್ರ ಸರಕಾರ ಮುಂದಾಗಿದೆ.ವಿಧೇಯಕಗಳಿಗೆ ಸಹಿ ಹಾಕದೇ ಬಾಕಿ ಉಳಿಸಿಕೊಂಡಿದ್ದ ತಮಿಳುನಾಡು ರಾಜ್ಯಪಾಲರ ಕ್ರಮವನ್ನು ತರಾಟೆಗೆ ತೆಗೆದುಕೊಂಡಿದ್ದ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಹಾಗೂ ನ್ಯಾ. ಆರ್. ಮಹಾದೇವನ್ ಅವರನ್ನೊಳಗೊಂಡ…

Read More

‘ಬೆಲೆ ಏರಿಕೆ’ ವಿರುದ್ಧ ಬೀದಿಗಿಳಿದ ಕಾಂಗ್ರೆಸ್, ಫ್ರೀಡಂಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

‘ಬೆಲೆ ಏರಿಕೆ’ ವಿರುದ್ಧ ಬೀದಿಗಿಳಿದ ಕಾಂಗ್ರೆಸ್, ಫ್ರೀಡಂಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆವೀರಮಾರ್ಗ ನ್ಯೂಸ್ ಬೆಂಗಳೂರು : ಕೇಂದ್ರ ಸರ್ಕಾರದ ನೀತಿಗಳಿಂದ ದೇಶದಲ್ಲಿ ಜೀವನಾವಶ್ಯಕ ವಸ್ತುಗಳ ಬೆಲೆ ದುಬಾರಿಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಇಂದು ನಗರದ ಫ್ರೀಡಂಪಾರ್ಕ್‌ನಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ ನಡೆಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಕೃಷ್ಣಬೈರೇಗೌಡ, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ, ಚಲುವರಾಯಸ್ವಾಮಿ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಕೆ.ಹೆಚ್.ಮುನಿಯಪ್ಪ ಸೇರಿದಂತೆ ಅನೇಕ ಸಚಿವರು,…

Read More

ಜಾತಿ ಜನಗಣತಿ ವರದಿ ತಿರಸ್ಕರಿಸುವಂತೆ ಸಿಎಂಗೆ ಶೋಭಾ ಕರಂದ್ಲಾಜೆ ಒತ್ತಾಯ

ಜಾತಿ ಜನಗಣತಿ ವರದಿ ತಿರಸ್ಕರಿಸುವಂತೆ ಸಿಎಂಗೆ ಶೋಭಾ ಕರಂದ್ಲಾಜೆ ಒತ್ತಾಯವೀರಮಾರ್ಗ ನ್ಯೂಸ್ ಬೆಂಗಳೂರು : ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸರ್ಕಾರಕ್ಕೆ ಸಲ್ಲಿಕೆ ಮಾಡಿರುವ ಜಾತಿ ಜನಗಣತಿ ವರದಿಯ ಬಗ್ಗೆ ಸಾಕಷ್ಟು ಸಂಶಯಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಅನುಷ್ಠಾನ ಮಾಡದೆ ತಿರಸ್ಕಾರ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿಗಳಿಗೆ ಎರಡು ಪುಟಗಳ ಪತ್ರ ಬರೆದಿರುವ ಶೋಭಾ ಕರಂದ್ಲಾಜೆ ಅವರು, ಕಾಂತರಾಜು ಆಯೋಗದ ಮೇಲುಸ್ತುವಾರಿಯಲ್ಲಿ ಸಿದ್ಧಪಡಿಸಲಾದ ಕರ್ನಾಟಕ ಜಾತಿ ಗಣತಿ…

Read More

ಧರ್ಮ ಒಡೆಯುವ ಕೆಲಸ ಮಾಡಬೇಡಿ ಬಿವೈವಿ ಎಚ್ಚರಿಕೆ

ಧರ್ಮ ಒಡೆಯುವ ಕೆಲಸ ಮಾಡಬೇಡಿ ಬಿವೈವಿ ಎಚ್ಚರಿಕೆವೀರಮಾರ್ಗ ನ್ಯೂಸ್ ಬೆಂಗಳೂರು : ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ಜಾತಿ, ಜಾತಿಗಳ ನಡುವೆ ಧರ್ಮ, ಧರ್ಮಗಳ ನಡುವೆ ಬಿರುಕು ಮೂಡಿಸುವ ಕೆಲಸವನ್ನು ಇನ್ನಾದರೂ ಕೈ ಬಿಡಿ. ಇಲ್ಲವಾದರೆ ಇಷ್ಟರಲ್ಲೇ ರಾಜ್ಯದ ಜನತೆಯೇ ದಂಗೆ ಎದ್ದು ನಿಮಗೆ ಬುದ್ದಿ ಕಲಿಸುವ ಕಾಲ ದೂರವಿಲ್ಲ ಎಂಬುದನ್ನು ನೀವು ಮರೆಯದಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.ಈ ಕುರಿತು ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್…

Read More