ಪೊಲೀಸ್‌ ಠಾಣೆಗೆ ಬೆಂಕಿ : 23 ಆರೋಪಿಗಳಿಗೆ ಶಿಕ್ಷೆ ಪ್ರಕಟ…

ನ್ಯಾಯಕ್ಕೆ ಜಯ ಸಿಕ್ಕಿದೆ ಎಂದ ಅಧಿಕಾರಿಗಳು,,,! ವೀರಮಾರ್ಗ ನ್ಯೂಸ್ : ಗದಗ : ಲಕ್ಷ್ಮೀಶ್ವರ ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣದ 23 ಮಂದಿ ಆರೋಪಿಗಳಿಗೆ ಗದಗ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. 2017 ಫೆ.5ರಂದು ಲಕ್ಷ್ಮೀಶ್ವರ ಪೊಲೀಸ್ ಠಾಣೆಯಲ್ಲಿ ನಡೆದಿತ್ತು. ಅಕ್ರಮ ಮರಳು ಸಾಗಿಸುವ ವಾಹನ ತಡೆದು ಚಾಲಕ ಶಿವಪ್ಪ ಡೋಣಿ ಎಂಬಾತನಿಗೆ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಶಿವಪ್ಪ, ಲಕ್ಷ್ಮೀಶ್ವರ ತಾಲೂಕಿನ ಬಟ್ಟೂರು ಗ್ರಾಮದ ನಿವಾಸಿಯಾಗಿದ್ದ. ಶಿವಪ್ಪನಿಗೆ…

Read More

ರಾಮಮನೋಹರ ಲೋಹಿಯಾ,ಜಯಂತಿಯ ಅಂಗವಾಗಿ ಚಿತ್ರಕಲಾ ಪರಿಷತನಲ್ಲಿ ಭಾರತ ಯಾತ್ರಾ ಕೇಂದ್ರ.

ವೀರಮಾರ್ಗ ನ್ಯೂಸ್ : ವಿಜಯನಗರ್ ಜಿಲ್ಲಾ : ಡಾ.ರಾಮಮನೋಹರ ಲೋಹಿಯಾ ಜಯಂತಿಯ ಅಂಗವಾಗಿ ಬೆಂಗಳೂರಿನ ಚಿತ್ರಕಲಾ ಪರಿಷತನಲ್ಲಿ ಭಾರತ ಯಾತ್ರಾ ಕೇಂದ್ರ , ಎಂಪಿ ಪ್ರಕಾಶ್ ಸಮಾಜಮುಖಿ ಟ್ರಸ್ಟ್ , ಲೋಹಿಯಾ ಜೆಪಿ ವಿಚಾರ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಾಮಾಜಿಕ ಹೋರಾಟಗಾರರು ಹಾಗೂ ರಾಜಕೀಯ ಚಿಂತಕರಾದ ಮಾನ್ಯ ಶ್ರೀ ಯೋಗೇಂದ್ರ ಯಾದವ್ ಅವರಿಗೆ ಡಾ.ರಾಮಮನೋಹರ್ ಲೋಹಿಯಾ ಪ್ರಶಸ್ತಿ ಪ್ರದಾನ ಸಮ್ಮಾನ ಮಾಡಿ ಗೌರವಿಸಲಾಯಿತು. ಈ ಶುಭ ಸಂದರ್ಭದಲ್ಲಿ ಶ್ರೀ ರಾಜೀವ್ ರಾಯ್, ಸಂಸತ್ ಸದಸ್ಯರು…

Read More

ಡಿಕೆಶಿ ಆಪ್ತ ಶಾಸಕನ ವಿರುದ್ಧ ರಾಜೇಂದ್ರ ರಾಜಣ್ಣ ಸ್ಫೋಟಕ ಹೇಳಿಕೆ..!

ವೀರಮಾರ್ಗ ನ್ಯೂಸ್ : ತುಮಕೂರು : ಸಹಕಾರ ಸಚಿವ ಕೆ.ಎನ್‌. ರಾಜಣ್ಣ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಮೊದಲಿನಿಂದಲೂ ಒಳಗೊಳಗೆ ಹಲ್ಲು ಮಸೆಯುತ್ತಿದ್ದು, ಆಗಾಗ್ಗೆ ಬಹಿರಂಗ ಹೇಳಿಕೆಗಳ ಮೂಲಕ ಅಸಮಾಧಾನ ಸ್ಫೋಟಗೊಳ್ಳುತ್ತಲೇ ಇದೆ. ಈಗ ರಾಜಣ್ಣ ಅವರ ಪುತ್ರ ರಾಜೇಂದ್ರ ರಾಜಣ್ಣ ಅವರು ಡಿ.ಕೆ.ಶಿವಕುಮಾರ್‌ರವರ ಆಪ್ತ ಶಾಸಕನ ವಿರುದ್ಧಸ್ಫೋಟಕ ಹೇಳಿಕೆ ನೀಡುವ ಮೂಲಕ ಮತ್ತೊಂದು ಅಸಮಾಧಾನಕ್ಕೆ ಮುನ್ನುಡಿ ಬರೆದಿದ್ದಾರೆ. ಕೆ.ಎನ್‌.ರಾಜಣ್ಣ ಅವರ ಪುತ್ರ ವಿಧಾನಪರಿಷತ್‌ ಸದಸ್ಯ ರಾಜೇಂದ್ರ ರಾಜಣ್ಣ ಬಹಿರಂಗ ಹೇಳಿಕೆ ನೀಡುವ ಮೂಲಕ ಕುಣಿಗಲ್‌ ಕ್ಷೇತ್ರದ ಶಾಸಕ…

Read More

ಯುಗಾದಿ ಹಬ್ಬಕ್ಕೆ ಬರಲ್ಲ “ಗೃಹಲಕ್ಷ್ಮಿ”

ವೀರಮಾರ್ಗ ನ್ಯೂಜ್ ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ ಹಣವನ್ನು ಮುಂದಿನ ತಿಂಗಳು ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಕಂತುಗಳ ಹಣವನ್ನು ಈ ತಿಂಗಳ ಅಂತ್ಯದ ನಂತರ ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದರು.ಕಾಂಗ್ರೆಸ್‌‍ ಸರ್ಕಾರ ಅಧಿಕಾರದಲ್ಲಿದ್ದಾಗ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2 ಸಾವಿರ ಹೆಚ್ಚಿಸಲಾಗಿತ್ತು. ಆನಂತರ ಬಂದ ಸರ್ಕಾರಗಳು ಗೌರವ ಧನ ಹೆಚ್ಚಳ ಮಾಡಲಿಲ್ಲ. ಅಂಗನವಾಡಿ ಕಾರ್ಯಕರ್ತರ…

Read More

ಅವಕಾಶ ಕಲ್ಪಿಸಿದ ಜನರ ಸೇವೆಗಾಗಿ ನಾನು ಸದಾಸಿದ್ಧ: ಶಾಸಕ ಪಠಾಣ

ವೀರಮಾರ್ಗ ನ್ಯೂಜ್ ಶಿಗ್ಗಾವಿ : ಸಣ್ಣ, ಸಣ್ಣ ಸಮಾಜವನ್ನು ಮುಖ್ಯ ವಾಹಿನಿಗೆ ತರುವುದೇ ಕಾಂಗ್ರೆಸ್ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಶಾಸಕ ಯಾಸೀರಹಮ್ಮದ ಖಾನ ಪಠಾಣ ಹೇಳಿದರು.ಪಟ್ಟಣದ ದೈವಜ್ಞ ಸಮಾಜವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಣ್ಣ, ಸಣ್ಣ ಸಮಾಜದ ಜನರ ಆಶೀರ್ವಾದದಿಂದ ನನಗೆ ಈ ಬಾರಿ ಶಾಸಕನಾಗುವ ಅವಕಾಶ ಸಿಕ್ಕಿದೆ. ಅವಕಾಶ ಕಲ್ಪಿಸಿದ ಜನರ ಸೇವೆಗಾಗಿ ನಾನು ಸದಾಸಿದ್ಧನಿರುವೆ. ತಮ್ಮ ಸಮಾಜದ ಬೇಡಿಕೆಗಳಾದ ಗಣಪತಿ ದೇವಸ್ಥಾನದ ನಿರ್ಮಾಣ, ಸಭಾಭವನ, ಹಾಸ್ಟೇಲ್ ವ್ಯವಸ್ಥೆಯನ್ನು ಕಲ್ಪಿಸಲು ಶ್ರಮಿಸುವುದಾಗಿ ಹೇಳಿದರು….

Read More

ವಕೀಲರ ಸಂಘಕ್ಕೆ ನೂತನವಾಗಿ ಅಧ್ಯಕ್ಷರಾಗಿ ಲಕ್ಕಣ್ಣವರ, ಉಪಾಧ್ಯಕ್ಷರಾಗಿ ಟೊಪಣ್ಣವರ ಆಯ್ಕೆ

ವೀರಮಾರ್ಗ ನ್ಯೂಜ್ ಶಿಗ್ಗಾವಿ : ನಗರದಲ್ಲಿ ನಡೆದ ವಕೀಲರ ಸಂಘದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಎಸ್.ಬಿ.ಲಕ್ಕಣ್ಣವರ ಉಪಾಧ್ಯಕ್ಷರಾಗಿ ಎಸ್.ಜಿ. ಟೊಪಣ್ಣವರ, ಕಾರ್ಯದರ್ಶಿಯಾಗಿ ವಿವೇಕ ರಾಮಗೇರಿ ಸಹಕಾರ್ಯದರ್ಶಿಯಾಗಿ ಸಿ.ಬಿ. ವಾಲ್ಮೀಕಿ ಖಜಾಂಚಿಯಾಗಿ ಎಂ.ಎಲ್.ಕಳಸ ಆಯ್ಕೆಯಾದರು.ಕಾರ್ಯಕಾರ್ಯಮಂಡಳಿ ಸದಸ್ಯರಾಗಿ ಸಿ.ಬಿ.ಪಾಟೀಲ, ಎ.ಎ.ಗಂಜೇನವರ, ಸಿ.ಎಫ್.ಅಂಗಡಿ, ಎಸ್.ಎಂ.ಗಾಣಗೇರ, ಪಿ.ಪಿ.ಹೊಂಡದಕಟ್ಟಿ, ಪಿ.ಎಂ.ಗೊಂದಕರ, ಮಹಿಳಾ ಪ್ರತಿನಿಧಿಯಾಗಿ ವ್ಹಿ.ಪಿ.ಬಾಗೂರ ಅವಿರೋಧವಾಗಿ ಆಯ್ಕೆಯಾದರು.ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಕಣ್ಣವರ ಮಾತನಾಡಿ, ಜಾತಿ, ಧರ್ಮ, ಗುಂಪುಗಾರಿಕೆ ಮೀರಿ, ಸಾಮಾಜಿಕ ಪರಿಕಲ್ಪನೆ ಆದಾರದ ಮೇಲೆ ಈ ಚುನಾವಣೆ ನಡೆದಿದ್ದು, ೩ ವರ್ಷದ ಅಧಿಕಾರದ ಅವದಿಯಲ್ಲಿ…

Read More

ಕ್ಯಾಸನೂರ ಗ್ರಾಮದಲ್ಲಿ 20 ಲಕ್ಷ ರೂ ವೆಚ್ಚದ ಕಾಮಗಾರಿಗೆ ಶಾಸಕ ಮಾನೆ ಚಾಲನೆ

ವೀರಮಾರ್ಗ ನ್ಯೂಜ್ ಹಾನಗಲ್ : ತಾಲೂಕಿನ ಕ್ಯಾಸನೂರು ಗ್ರಾಮದಲ್ಲಿ 2023-24 ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ 20 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಗಟಾರ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಿದಾಗ ಜನತೆ ನೆಮ್ಮದಿಯಿಂದ ಬದುಕು ಸಾಗಿಸಲು ಸಾಧ್ಯವಿದೆ. ಹಾಗಾಗಿ ಹಂತ, ಹಂತವಾಗಿ ಮೂಲಸೌಕರ್ಯ ಒದಗಿಸಲು ಗಮನ ನೀಡಲಾಗಿದೆ. ಬೆಲೆ ಏರಿಕೆಯ ಬಿಸಿಯಿಂದ ಬಸವಳಿದಿದ್ದ ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳು ನೆಮ್ಮದಿ ತರಿಸಿವೆ. ಗ್ಯಾರಂಟಿ…

Read More

ರಚನಾತ್ಮಕ ಕಾರ್ಯಗಳಿಂದ ಸಮಾಜ ಸಮೃದ್ಧ : ರಂಭಾಪುರಿಶ್ರೀ

ವೀರಮಾರ್ಗ ನ್ಯೂಜ್ ಆಳಂದ : ಮನುಷ್ಯ ಯಾವಾಗಲೂ ಸುಖಾಪೇಕ್ಷಿ. ಸುಖ ಶಾಂತಿ ಬದುಕಿಗೆ ಧರ್ಮ ಪರಿಪಾಲನೆ ಮುಖ್ಯ. ರಚನಾತ್ಮಕ ಮತ್ತು ಗುಣಾತ್ಮಕ ಸತ್ಕಾರ್ಯಗಳಿಂದ ಸಮಾಜ ಸದೃಢಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಭಾನುವಾರ ತಾಲೂಕಿನ ಚಲಗೇರಾ ಗ್ರಾಮದಲ್ಲಿ ಶ್ರೀ ಜಗದ್ಗುರು ರಂಭಾಪುರೀಶ್ವರ ಸದನದ ಲೋಕಾರ್ಪಣೆ-ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಮನುಷ್ಯ ಜೀವನದಲ್ಲಿ ಧರ್ಮ ಅರ್ಥ ಕಾಮ…

Read More

ಸವಣೂರ ಕಚುಸಾಪ ತಾಲೂಕ ಅಧ್ಯಕ್ಷರಾಗಿ ನಿಂಗಪ್ಪ ಆರೇರ ಆಯ್ಕೆ

ವೀರಮಾರ್ಗ ನ್ಯೂಜ್ ಹಾವೇರಿ : ನಗರದ ಕಚುಸಾಪ ಕಛೇರಿಯಲ್ಲಿ ಸವಣೂರು ತಾಲೂಕಿನ ಹಿರೇಮುಗದೂರ ಗ್ರಾಮದ ನಿವಾಸಿಗಳು, ಅಮ್ಮಾ ಸಂಸ್ಥೆ(ರಿ) ಸಂಸ್ಥಾಪಕರು,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿ ಸದಸ್ಯರು,ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಗೌರವ ಸಹಕಾರ್ಯದರ್ಶಿಗಳು, ಹಿರೇಮುಗದೂರ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ಎಂ. ಆರೇರ ಅವರನ್ನು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಸವಣೂರ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕಚುಸಾಪ ಜಿಲ್ಲಾದ್ಯಕ್ಷರಾದ ವಿರೂಪಾಕ್ಷ ಲಮಾಣಿ,ಪ್ರಧಾನ ಕಾರ್ಯದರ್ಶಿಗಳಾದ ಡಾ. ಗಂಗಯ್ಯ ಕುಲಕರ್ಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಚುಟುಕು…

Read More

ಪತ್ರಕರ್ತ, ಸಮಾಜಸೇವಕ ಚಂದನ್ 2025 ನೇ ಪ್ರಶಸ್ತಿ.

ಪತ್ರಕರ್ತ, ಸಮಾಜಸೇವಕ ಚಂದನ್ ನಂದರಬೆಟ್ಟು ಅವರಿಗೆ 2025 ನೇ ಸಾಲಿನ ಕನ್ನಡ ಪಯಸ್ವಿನಿ ಪ್ರಶಸ್ತಿ ವೀರಮಾರ್ಗ ನ್ಯೂಸ್ : ಕಾಸರಗೋಡು : ಕನ್ನಡ ಭವನದಿಂದ ಕೊಡಮಾಡುವ 2025 ನೇ ಸಾಲಿನ ಪ್ರತಿಷ್ಠಿತ ಅಂತರಾಜ್ಯ ಪ್ರಶಸ್ತಿಯಾದ ಕನ್ನಡ ಪಯಸ್ವಿನಿ ಪ್ರಶಸ್ತಿಗೆ ಕೊಡಗಿನ ಯುವ ಪ್ರತಿಭೆ, ಪತ್ರಕರ್ತ, ಸಮಾಜಸೇವಕ ಚಂದನ್ ನಂದರಬೆಟ್ಟು ಆಯ್ಕೆಯಾಗಿದ್ದಾರೆ. ಸಮಾಜಸೇವೆ ಹಾಗು ಸಾಹಿತ್ಯ ಕ್ಷೇತ್ರದಲ್ಲಿನ ಕಾರ್ಯವೈಖರಿಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಗಾಳಿಬೀಡು ಗ್ರಾಮದ. ನಿವೃತ್ತ ಸಬ್ ಇನ್ಸ್ಪೆಕ್ಟರ್ ಕೃಷ್ಣ ಎನ್ ಎಂ ಹಾಗು…

Read More