ಕರ್ನಾಟಕ ಗ್ರಾಮ ಸ್ವರಾಜ್‌ ಹಾಗೂ ಪಂಚಾಯತ್‌ ರಾಜ್‌ ವಿಧೇಯಕ ವಿಧಾನಸಭೆಯಲ್ಲಿ ಮಂಡನೆ

ವೀರಮಾರ್ಗ ನ್ಯೂಸ್ : ಬೆಂಗಳೂರು : ಗ್ರಾಮೀಣ ಭಾಗದಲ್ಲಿ ಕಟ್ಟಡ ನಿರ್ಮಾಣದ ವೇಳೆ ಗ್ರಾಮ ಪಂಚಾಯಿತಿ ಅಥವಾ ಯೋಜನಾ ಪ್ರಾಧಿಕಾರಗಳ ಮೂಲಕ ಲೇಔಟ್‌ ಪ್ಲಾನ್‌ಗೆ ಪೂರ್ವಾನುಮೋದನೆ ಪಡೆದುಕೊಳ್ಳಬೇಕು ಎಂಬ ನಿಯಮವನ್ನೊಳಗೊಂಡ ಕರ್ನಾಟಕ ಗ್ರಾಮ ಸ್ವರಾಜ್‌ ಹಾಗೂ ಪಂಚಾಯತ್‌ ರಾಜ್‌ ವಿಧೇಯಕವನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಪರವಾಗಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ವಿಧೇಯಕವನ್ನು ಮಂಡಿಸಿದರು.ಕಟ್ಟಡ ನಿವೇಶನಗಳಿಗೆ ಹೊಸ ಖಾತೆ ಅಥವಾ ಪಿಐಡಿಯನ್ನು ನೀಡುವ ಮೊದಲು ಲೇಔಟ್‌ ಪ್ಲಾನ್‌ಗೆ…

Read More

ಮಧ್ಯ ವರ್ತಿಗಳಿಂದ ಹಣ ದುರುಪಯೋಗವಾಗದಂತೆ ಮುನ್ನೆಚ್ಚರಿಕೆ ಕ್ರಮ : ಎಂ.ಬಿ. ಪಾಟೀಲ್‌

ವೀರಮಾರ್ಗ ನ್ಯೂಸ್ : ಬೆಂಗಳೂರು : ಕರ್ನಾಟಕ ಸ್ಟೇಟ್‌ ಮಾರ್ಕೆಟಿಂಗ್‌ ಕಮ್ಯುನಿಕೇಷನ್‌ ಆ್ಯಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್‌ನಲ್ಲಿ ಮಧ್ಯ ವರ್ತಿಗಳಿಂದ ಹಣ ದುರುಪಯೋಗವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ವಿಧಾನಪರಿಷತ್‌ನಲ್ಲಿ ತಿಳಿಸಿದರು.ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌‍ನ ಎಸ್‌‍.ಎಲ್‌.ಭೋಜೇಗೌಡ ಅವರು, ಕರ್ನಾಟಕ ಸ್ಟೇಟ್‌ ಮಾರ್ಕೆಟಿಂಗ್‌ ಕಮ್ಯುನಿಕೇಷನ್‌ ಆ್ಯಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್‌ನಲ್ಲಿ ಮಧ್ಯ ವರ್ತಿಗಳಿಂದ ಹಣ ದುರುಪಯೋಗ ಆಗುತ್ತಿದೆ ಎಂದು ಸಚಿವರ ಗಮನಸೆಳೆದರು.ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಹವರ್ತಿಗಳಿಗೆ ಟೆಂಡರ್‌ ನೀಡಲು ಕಾನೂನಿನಲ್ಲಿ ಅವಕಾಶವಿದೆ….

Read More

ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಲು ವಿಧೇಯಕ ಮಂಡನೆ

ವೀರಮಾರ್ಗ ನ್ಯೂಜ್ ಬೆಂಗಳೂರು : ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.೪ ರಷ್ಟು ಮೀಸಲಾತಿ ನೀಡುವ ಹಾಗೂ ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು.ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದಂತೆ ಹಿಂದುಳಿದ ವರ್ಗಗಳಿಗೆ ಹಾಗೂ ಅಲ್ಪಸಂಖ್ಯಾತರಿಗೆ ಸಾರ್ವಜನಿಕ ಸರಕು ಹಾಗೂ ಸರ್ಕಾರಿ ಗುತ್ತಿಗೆಗಳಲ್ಲಿ ಮೀಸಲಾತಿ ನೀಡುವ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ವಿಧಾನಸಭೆಯಲ್ಲಿಂದು ಮಂಡಿಸಿದರು. ಬಜೆಟ್‌ನ ಮೇಲೆ ವಿಧಾನಸಭೆಯಲ್ಲಿಂದು ಚರ್ಚೆಗಳು ನಡೆಯುತ್ತಿವೆ. ಬಜೆಟ್‌ನ ಆಯವ್ಯಯಕ್ಕೆ…

Read More

ಸಂವಿಧಾನ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಮತಬ್ಯಾಂಕ,ಗಟ್ಟಿಮಾಡಿಕೊಳ್ಳುತ್ತಿದೆ.

ಕಾಂಗ್ರೆಸ್ ಸಂವಿಧಾನ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಮತಬ್ಯಾಂಕ ಗಟ್ಟಿಮಾಡಿಕೊಳ್ಳುತ್ತಿದೆ : ಬಸವರಾಜ ಬೊಮ್ಮಾಯಿ ಅಂಬೇಡ್ಕರ್ ವಿರುದ್ದ ಜವಾಹರಲಾಲ್ ನೇಹರೂ ಪ್ರಚಾರ ಮಾಡಿ ಅವರನ್ನು ಸೋಲಿಸಿದ್ದು : ಬಸವರಾಜ ಬೊಮ್ಮಾಯಿ ವೀರಮಾರ್ಗ ನ್ಯೂಸ್ : ಬೆಂಗಳೂರು: ಕಾಂಗ್ರೆಸ್ ನವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ಮೂಲ ತತ್ವದ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಸಮಾಜದಲ್ಲಿ ಕ್ಷೋಭೆ ಉಂಟು ಮಾಡಿ, ತಮ್ಮ ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಪ್ರಯತ್ನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.ನವ…

Read More

ಬೇಸಿಗೆ ಎದುರಿಸಲು ಆಯುಷ್ ಉಪಾಯ,,!

ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ ಸಲಹೆ ಬೇಸಿಗೆ ಕಾಲದಲ್ಲಿ ಅನುಸರಿಸಬೇಕಾದ ಜೀವನಶೈಲಿ, ಆಹಾರ ವಿಹಾರಗಳ ಮಾಹಿತಿಗಾಗಿ ಆಯುಷ್ ಚಿಕಿತ್ಸಾಲಯಗಳಿಗೆ ಭೇಟಿ ನೀಡಿ ಬೇಸಿಗೆ ಎದುರಿಸಲು ಆಯುಷ್ ಉಪಾಯ ವೀರಮಾರ್ಗ ನ್ಯೂಸ್ : ಚಿತ್ರದುರ್ಗ :ಬೇಸಿಗೆ ಕಾಲ ತೀವ್ರವಾಗುತ್ತಿದ್ದು, ವಾತಾವರಣದ ಉμÁ್ಣಂಶ ಏರುತ್ತಲಿದೆ. ಆದ ಕಾರಣ ಸಾರ್ವಜನಿಕರು ಬಿಸಿಲಿನ ತಾಪದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸೂಕ್ತ ಮುಂಜಾಗ್ರತಾ ಕ್ರಮ ವಹಿಸಬೇಕು. ಜತೆಗೆ ಬೇಸಿಗೆ ಎದುರಿಸಲು ಆಯುಷ್ ಉಪಾಯಗಳನ್ನು ಅಳವಡಿಸಿಕೊಂಡು, ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಆಯುಷ್…

Read More

ರಾಣೇಬೆನ್ನೂರು | ಸ್ವಾತಿ ಕೊಲೆಗೆ ಖಂಡನೆ : ಸೂಕ್ತ ತನಿಖೆಗೆ ಆಗ್ರಹ

ಎಬಿವಿಪಿ, ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು, ಖಾಸಗಿ ಆಸ್ಪತ್ರೆ ನರ್ಸ್ ಪ್ರತಿಭಟನೆ ವೀರಮಾರ್ಗ ನ್ಯೂಸ್ :  ರಾಣೇಬೆನ್ನೂರು : ಲವ್ ಜಿಹಾದ್ ಕಾರಣಕ್ಕಾಗಿ ರಟ್ಟೀಹಳ್ಳಿ ತಾಲ್ಲೂಕಿನ ಮಾಸೂರ ಗ್ರಾಮದ ಸ್ವಾತಿ ರಮೇಶ ಬ್ಯಾಡಗಿ ಹತ್ಯೆಯನ್ನು ಖಂಡಿಸಿ, ಸೋಮವಾರ ಎಬಿವಿಪಿ ವಿದ್ಯಾರ್ಥಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು ಮತ್ತು ಖಾಸಗಿ ಆಸ್ಪತ್ರೆಯ ನರ್ಸ್ ಸಿಬ್ಬಂದಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಿದರು.ನಂತರ ತಹಶೀಲ್ದಾರ್ ಅರುಣಕುಮಾರ ಕಾರಗಿ ಅವರಿಗೆ ಮನವಿ ಸಲ್ಲಿಸಿದರು. ನಗರದ ಖನ್ನೂರ ನರ್ಸಿಂಗ್ ಕಾಲೇಜಿನಿಂದ ಪ್ರತಿಭಟನಾ…

Read More

ಮಾ.22, 23ಕ್ಕೆ ಕರ್ನಾಟಕ ಲೇಖಕಿಯರ 8ನೇ ಸಮ್ಮೇಳನ;ಡಾ.ಎಚ್‌.ಎಸ್.ಶ್ರೀಮತಿ ಸಮ್ಮೇಳನಾಧ್ಯಕ್ಷೆ

ವೀರಮಾರ್ಗ ನ್ಯೂಸ್ :  ಬೆಂಗಳೂರು : ಕರ್ನಾಟಕ ಲೇಖಕಿಯರ ಸಂಘದ 8ನೇ ಅಖಿಲ ಕರ್ನಾಟಕ ಸಮ್ಮೇಳನವನ್ನು ಮಾ.22, 23ಕ್ಕೆ ಹಮ್ಮಿಕೊಳ್ಳಲಾಗಿದೆ. 12 ವರ್ಷಗಳ ನಂತರ ಹಮ್ಮಿಕೊಳ್ಳಲಾಗಿರುವ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಡಾ.ಎಚ್.ಎಸ್. ಶ್ರೀಮತಿಯವರು ಆಯ್ಕೆಯಾಗಿದ್ದಾರೆ.ಅರಮನೆ ರಸ್ತೆಯಲ್ಲಿರುವ ಭಾರತ್ ಸೈಟ್ಸ್ ಆ್ಯಂಡ್ ಗೈಡ್‌ನ ಕೊಂಡಜ್ಜಿ ಬಸಪ್ಪ ಸಭಾಂಗಣದ ಡಾ.ಕಮಲಾ ಹಂಪನಾ ವೇದಿಕೆಯಲ್ಲಿ ನಡೆಯಲಿರುವ ಸಮ್ಮೇಳನವನ್ನು ಮಾ.22ರಂದು ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಡಾ. ಎಚ್.ಎಲ್.ಪುಷ್ಪ ಪ್ರಸ್ತಾವನ ಮಂಡಿಸಲಿದ್ದು, ಹಿರಿಯ ಚಿಂತನ ರಾಜೇಂದ್ರ…

Read More

ಸ್ವಾತಿ ಕೊಲೆ ಹಿಂದೆ ಲವ್ ಜಿಹಾದ್ ಆರೋಪ ಸುಳ್ಳು : ಶಾಸಕ ಬಣಕಾರ

ವೀರಮಾರ್ಗ ನ್ಯೂಸ್ : ಹಾವೇರಿ : ಮಾಸೂರಿನ ಸ್ವಾತಿ ಬ್ಯಾಡಗಿ ಕೊಲೆ ಹಿಂದೆ ಲವ್ ಜಿಹಾದ್ ಎಂಬ ಆರೋಪ ಸುಳ್ಳು, ಇದಕ್ಕೆ ಸಾಕ್ಷಿ ಇಲ್ಲ. ಆರೋಪ ಮಾಡುವವರು ಸಾಕ್ಷಿ ಕೊಡುತ್ತಿಲ್ಲ ಆದರೆ, ಈ ಕೃತ್ಯ ಖಂಡನೀಯ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಹಿರೇಕೆರೂರ ಕ್ಷೇತ್ರದ ಶಾಸಕ ಯು.ಬಿ ಬಣಕಾರ ಹೇಳಿದರು.ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಸರಿಯಾಗಿ ತನಿಖೆ ಮಾಡಿದ್ದಾರೆ.ಅಪರಿಚಿತ ಶವ ಸಿಕ್ಕ ನಂತರ ಕಾನೂನು ಪ್ರಕಾರ ಅಂತ್ಯಕ್ರಿಯೆ ಮಾಡಿದ್ದಾರೆ. ಆಕೆಯ ಕುಟುಂಬದವರು ನಾಪತ್ತೆ…

Read More

ಹಾವೇರಿ : ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪಾಟೀಲ ಅವಿರೋಧ ಆಯ್ಕೆ, ಉಪಾಧ್ಯಕ್ಷರಾಗಿ ಮಾವಿನತೋಪ ಆಯ್ಕೆ

ವೀರಮಾರ್ಗ ನ್ಯೂಸ್ : ಹಾವೇರಿ : ಹಾವೇರಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಹಾವೇಮುಲ್‌ದ ನೂತನ ಅಧ್ಯಕ್ಷರಾಗಿ ಮಂಜನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಉಜ್ಜನಗೌಡ ಮಾವಿನತೋಪು ಅವಿರೋಧವಾಗಿ ಆಯ್ಕೆಯಾದರು.ನಗರದ ಪಶು ಆಸ್ಪತ್ರೆ ಆವರಣದಲ್ಲಿನ ಹಾಲು ಒಕ್ಕೂಟದ ಕಚೇರಿಯಲ್ಲಿ ಸೋಮವಾರ ಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ಹಮ್ಮಿಕೊಳ್ಳಲಾಗಿತ್ತು. ಸದಸ್ಯರೆಲ್ಲ ಒಂದಾಗಿ ಚುನಾವಣೆ ನಡೆಸದೇ ಅವಿರೋಧವಾಗಿ ಆಯ್ಕೆ ಮಾಡಿದರು.ಮಾ.೨ರಂದು ಒಕ್ಕೂಟದ ನಿರ್ದೇಶಕರ ಸ್ನಾನಗಳಿಗೆ ಚುನಾವಣೆ ನಡೆಸಲಾಗಿತ್ತು, ಸೋಮವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಮಾತ್ರ ಸಲ್ಲಿಕೆಯಾಗಿತ್ತು….

Read More

ವಿದ್ಯಾರ್ಥಿಗಳು ಉತ್ತಮ ಫಲಿತಾಂಶದಿಂದ ಶಾಲೆಗೆ ಕೀರ್ತಿ ತರಲಿ : ಆರೇರ

ವೀರಮಾರ್ಗ ನ್ಯೂಸ್ : ಸವಣೂರು : ವಿದ್ಯಾರ್ಥಿಗಳು ಶ್ರಮವಹಿಸಿ ಓದುವ ಮೂಲಕ ಉತ್ತಮ ಫಲಿತಾಂಶ ಪಡೆದು ಶಾಲೆಗೆ ಹಾಗೂ ಊರಿಗೆ ಕೀರ್ತಿ ತರುವ ಪ್ರಯತ್ನ ಮಾಡಿರಿ ಎಂದು ಅಮ್ಮಾ ಸಂಸ್ಥೆ(ರಿ)ಯ ಸಂಸ್ಥಾಪಕರು ಹಾಗೂ ಗ್ರಾಪಂ ಸದಸ್ಯರಾದ ನಿಂಗಪ್ಪ ಎಂ ಆರೇರ ಹೇಳಿದರು.ತಾಲ್ಲೂಕಿನ ಹಿರೇಮುಗದೂರ ಗ್ರಾಮದ ಟಿಎಂಎಇಎಸ್ ಪ್ರೌಢ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅಮ್ಮಾ ಸಂಸ್ಥೆಯ ವತಿಯಿಂದ ಪೆನ್ನು- ಪೆನ್ಸಿಲ್ ವಿತರಣೆ ಮಾಡಿ ಪರೀಕ್ಷೆಗೆ ಶುಭ ಕೋರಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಹಂತ ಮಹತ್ವ ಪಡೆದಿದೆ. ಭವಿಷ್ಯದ ಶಿಕ್ಷಣಕ್ಕೆ ಈ…

Read More