ಸರ್ಕಾರದ ಸವಲತ್ತುಗಳನ್ನು ಸದುಪಯೋಗ ಪಡೆಸಿಕೊಳ್ಳಿ : ಅರ್ಷಾದ

ವೀರಮಾರ್ಗ ನ್ಯೂಜ್ ಶಿಗ್ಗಾವಿ : ವಿದ್ಯಾರ್ಥಿಗಳು ತಾವು ಪಡೆದ ಕೌಶಲ್ಯವನ್ನೇ ಸದುಪಯೋಗ ಪಡೆಸಿಕೊಂಡು ಉದ್ಯಮಿಯಾಗಿ, ಉದ್ಯೋಗ ನೀಡಿ, ನಿರೂದ್ಯೋಗ ಸಮಸ್ಯಯನ್ನು ಹೋಗಲಾಡಿಸುವಂತೆ ಸಂಪನ್ಮೂಲ ವ್ಯಕ್ತಿ ಮಹಮ್ಮದ ಅರ್ಷಾದ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ತಾಲೂಕಿನ ಗುಡ್ಡದಚೆನ್ನಾಪುರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮವನ್ನುದ್ದೇಸಿಸಿ ಮಾತನಾಡಿದ ಅವರು, ಸ್ವಯಂ ಉದ್ಯೋಗ ಪ್ರಾರಂಭಿಸಲು ಸರ್ಕಾರ ಸಾಕಷ್ಟು ಪ್ರಮಾಣದಲ್ಲಿ ಸಬ್ಸಿಡಿ ನೀಡುವುದರಮೂಲಕ ದನಸಹಾಯ ಕಲ್ಪಿಸಲಾಗುತ್ತಿದೆ. ಸರ್ಕಾರದ ಸವಲತ್ತುಗಳನ್ನು ಸದುಪಯೋಗ ಪಡೆಸಿಕೊಂಡು ಸ್ವಯಂ ಉದ್ಯೋಗ ಪ್ರಾರಂಭಿಸಿ ಉದ್ಯಮಿ ಯಾಗಿ, ಯುವಸಮೂಹಕ್ಕೆ ಉದ್ಯೋಗ ಅವಕಾಶ…

Read More

ಸಕಲ ವೈಭವದೊಂದಿಗೆ ಶ್ರೀ ಶರಣಬಸವೇಶ್ವರ ಜಾತ್ರೆ

ವೀರಮಾರ್ಗ ನ್ಯೂಜ್ ಶಿಗ್ಗಾವಿ : ತಾಲೂಕಿನ ಸದಾಶಿವಪೇಟೆಯ ಶ್ರೀ ಶರಣ ಬಸವೇಶ್ವರ ದಾಸೋಹಮಠದ ೪೫ನೇ ವರ್ಷದ ಜಾತ್ರಾ ಮಹೋತ್ವವದ ಅಂಗವಾಗಿ ನಡೆದ ಶ್ರೀ ಶರಣಬಸವೇಶ್ವರರ ಭಾವಚಿತ್ರದ ಮೇರವಣಿಗೆಗೆ ಶ್ರೀ ಶಿವದೇವ ಶರಣರು ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.ಮೇರವಣಿಗೆ ಸುಮಂಗಲೆಯರ ಕುಂಭೋತ್ಸವ, ಸಕಲ ವಾದ್ಯ ವೈಭವಗಳೊಂದಿಗೆ ಶ್ರೀ ಮಠದಿಂದ ಪ್ರಾರಂಭಗೋಂಡು ಸದಾಶಿವಪೇಟೆ, ನಾರಾಯಣಪುರ, ಇಬ್ರಾಹಿಂಪುರ, ಮುನವಳ್ಳಿ ಗ್ರಾಮಗಳ ಪ್ರಮುಖ ರಸ್ತೆಗಳಲ್ಲಿ ಸಾಗಿಬಂದಿತು. ಮೇರವಣಿಗೆಯನ್ನು ಭಕ್ತರು ಅಂಗಳಕೆ ಮಡಿನೀರು ಚಿಮುಕಿಸಿ, ರಂಗೋಲಿಹಾಕಿ, ತಳಿರು ತೋರಣಕಟ್ಟಿ ಭಕ್ತಿಯಿಂದ ಬರಮಾಡಿಕೋಂಡು ಹೂವಿನಮಾಲೆ,…

Read More

ಹಾನಗಲ್ ಗ್ರಾಮದ ದ್ಯಾಮವ್ವನ ಜಾತ್ರೆಯ ಸಂಭ್ರಮ

ವೀರಮಾರ್ಗ ನ್ಯೂಸ್ ಹಾನಗಲ್ : ಇಲ್ಲಿ ಗ್ರಾಮದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಗ್ರಾಮದೇವಿ ಮಹಾರಥೋತ್ಸವ ಸಹಸ್ರ ಸಹಸ್ರ ಸಂಖ್ಯೆಯ ಭಕ್ತ ಸಮೂಹದ ಹರ್ಷೋದ್ಘಾರದ ಮಧ್ಯೆ ಸಂಭ್ರಮದಿಂದ ನೆರವೇರಿತು.ಭಕ್ತರ ದ್ಯಾಮವ್ವ ನಿನ್ನಾಲ್ಕುಧೋ.. ಉಧೋ… ಜಯಘೋಷಣೆ ಮತ್ತು ವಿವಿಧ ಕಲಾವಾಧ್ಯ ಮೇಳಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಸಾಗಿಬಂದ ಮಹಾರಥೋತ್ಸವ ಬುಧವಾರ ನಸುಕಿನಲ್ಲಿ ಪಾದಗಟ್ಟಿ ಬಳಿಯ ಆಕರ್ಷಕ ಮಂಟಪದಲ್ಲಿ ಕೊನೆಗೊಂಡು ಬಳಿಕ ಪ್ರತಿಷ್ಠಾಪನಾ ಮಹೋತ್ಸವ ಜರುಗಿತು.ಮಂಗಳವಾರ ರಾತ್ರಿ ಗ್ರಾಮದೇವಿ ದೇವಸ್ಥಾನದ ಬಳಿ ವಿಶೇಷ ಪೂಜೆ ಮತ್ತು ಧಾರ್ಮಿಕ ವಿಧಿಗಳು ಸಂಪನ್ನಗೊಂಡ…

Read More

ಗಗನ ಯಾತ್ರಿ ಸುನಿತಾ ಮರಳಿ ಭೂತಾಯಿ ಮಡಿಲಿಗೆ, ವಿದ್ಯಾರ್ಥಿಗಳಿಂದ ಸಂಭ್ರಮ

ವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಪಟ್ಟಣದ ಸ್ಕೂಲ್ ಚಂದನದ ವಿದ್ಯಾರ್ಥಿಗಳು ಬುಧವಾರ ಶಾಲಾ ಅಂಗಳದಲ್ಲಿ ಸೇರಿ ಗಗನಯಾತ್ರಿಗಳು ಸುರಕ್ಷಿತವಾಗಿ ಭೂತಾಯಿ ಮಡಿಲಿಗೆ ಆಗಮಿಸಿದ್ದಕ್ಕೆ ಸಂಭ್ರಮ ವ್ಯಕ್ತಪಡಿಸಿದರು. ನೂರಾರು ಮಕ್ಕಳು ಸುನೀತಾ ಹಾಗೂ ಅವರ ಸಂಗಡಿಗ ಯಾತ್ರಿಗಳಿಗೆ ಶುಭಕೋರುವ ನಿಟ್ಟಿನಲ್ಲಿ ಪರಸ್ಪರ ಅಭಿನಂದಿಸಿ ಸುನೀತಾ ಅವರ ಹೆಸರಿನಲ್ಲಿ ಜಯಘೋಷಗಳನ್ನು ಮೊಳಗಿಸಿದರು.ಶಾಲಾ ವಿದ್ಯಾರ್ಥಿಗಳು ೯ ತಿಂಗಳ ನಂತರ ಬಾಹ್ಯಾಕಾಶ ಗರ್ಭದಿಂದ ಭೂತಾಯಿಯ ಮಡಿಲಿಗೆ ಸೇರಿದ ಗಗನಯಾತ್ರಿಗಳಿಗೆ ಅಭಿನಂದನೆಯನ್ನು ಸಲ್ಲಿಸಿ, ಸುನಿತಾ ಅವರು ಭೂಮಿಗೆ ಬರುತ್ತಿದ್ದಂತೆ, ಅವರು ಭೂಮಿಗೆ ಮರಳಿ ಬರುವಲ್ಲಿ…

Read More

ಗುರಿ ಗುರುವಿಲ್ಲದ ಜೀವನ ನಿರರ್ಥಕ: ರಂಭಾಪುರಿಶ್ರೀ

ವೀರಮಾರ್ಗ ನ್ಯೂಸ್ ಕಲಕೇರಿ : ಬಾಳೆಗೊಂದು ಗೊನೆಯಿರುವಂತೆ ಬಾಳಿಗೊಂದು ಗುರಿಯಿರಬೇಕು. ಗುರಿ ಇಲ್ಲದ ಗುರು ಇಲ್ಲದ ಮಾನವ ಜೀವನ ನಿರರ್ಥಕ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಬುಧವಾರ ಕಲಕೇರಿ ಸುಕ್ಷೇತ್ರದ ಶ್ರೀ ಗುರು ಮರುಳಾರಾಧ್ಯ ಸಂಸ್ಥಾನ ಹಿರೇಮಠದಲ್ಲಿ ಜರುಗಿದ ಪುರಾಣ ಮಂಗಲ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಸಕಲ ಜೀವಾತ್ಮರಿಗೆ ಒಳಿತನ್ನೇ ಬಯಸಿದ ಧರ್ಮ ವೀರಶೈವ. ಈ ಧರ್ಮದ ತತ್ವ ಸಿದ್ಧಾಂತಗಳು ಜೀವನ ವಿಕಾಸಕ್ಕೆ ಅಡಿಪಾಯವಾಗಿವೆ. ಸ್ವಾರ್ಥ ಗೆದ್ದವನು ಶಾಂತಿ ಪಡೆದವನು ಮತ್ತು…

Read More

ಹಿರೇಮುಗದೂರ ಗ್ರಾಮದ ಪ್ರಾ.ಕೃ.ಪ.ಸ. ಸಂಘಕ್ಕೆ ಅಧ್ಯಕ್ಷರಾಗಿ ಪರಶುರಾಮ ಆರೇರ, ಉಪಾಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮಾ ಸೋಮಸಾಗರ ಆಯ್ಕೆ

ವೀರಮಾರ್ಗ ನ್ಯೂಸ್ ಸವಣೂರು : ಸಹಕಾರ ಕ್ಷೇತ್ರದಲ್ಲಿ ನನಗೆ ಸೇವೆ ಮಾಡಲು ಅವಕಾಶ ನೀಡಿದ ಎಲ್ಲಾ ಸಹಕಾರಿಗಳಿಗೆ ಹಾಗೂ ಸಹಕಾರ ನೀಡಿದ ಎಲ್ಲಾ ಗುರು ಹಿರಿಯರಿಗೆ ಧನ್ಯವಾದಗಳು ಎಂದು ಶ್ರೀ ದುರ್ಗಾಂಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾದ ಪರಶುರಾಮ ಮಾ. ಆರೇರ ಹೇಳಿದರು. ತಾಲ್ಲೂಕಿನ ಹಿರೇಮುಗದೂರ ಗ್ರಾಮದ ಶ್ರೀ ದುರ್ಗಾಂಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾಗಿ ಅವರು ಎಲ್ಲರೂ ಕೃತಜ್ಞತೆ ಸಲ್ಲಿಸಿ ಅವರು ಮಾತನಾಡಿದರು. ನಮ್ಮೂರ ಹಾಗೂ ಸುತ್ತಮುತ್ತಲಿನ…

Read More

ಏಪ್ರಿಲ್ ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಚುನಾವಣೆ : ಯಾರಾಗಲಿದ್ದಾರೆ ಸಾರಥಿ..?

ಬೆಂಗಳೂರು : ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ವೇದಿಕೆ ಸಿದ್ದಗೊಳ್ಳುತ್ತಿದ್ದು, ಏಪ್ರಿಲ್ ತಿಂಗಳಲ್ಲಿ ಬಿಜೆಪಿ ಸಾರಥಿ ಯಾರು? ಎನ್ನುವುದು ಸ್ಪಷ್ಟವಾಗಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಯ ಬಳಿಕವೇ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕಾತಿಗೆ ಚಾಲನೆ ದೊರೆಯಲಿದೆ.ಏಪ್ರಿಲ್ ಮೊದಲ ವಾರದಲ್ಲಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಇದಾದ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅಥವಾ ಆವಿರೋಧ ಆಯ್ಕೆ ನಡೆಯುವ ಸಾಧ್ಯತೆ ಗೋಚರಿಸಿದೆ. ರಾಜ್ಯ ಬಿಜೆಪಿ ಅಧ್ಯಕ್ಷರ ಚುನಾವಣೆ ನಡೆಸಲು ಅನುಕೂಲವಾಗುವಂತೆ ಜಿಲ್ಲಾ ಬಿಜೆಪಿ…

Read More

ರಾಜ್ಯಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿದ್ದಾರೆ : ಸ್ಪೀಕರ್ ಗರಂ

ವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿ ದ್ದಾರೆ ಎಂದು ಸಭಾಧ್ಯಕ್ಷ ಯು.ಟಿ. ಖಾದರ್ ವಿಧಾನಸಭೆಗೆ ತಿಳಿಸಿದರು. ಕಾನೂನು ಮತ್ತು ಸುವ್ಯವಸ್ಥೆ ಕುರಿತು ವಿರೋಧಪಕ್ಷದ ನಾಯಕ ಆರ್. ಅಶೋಕ, ವಿಷಯ ಪ್ರಸ್ತಾಪಿಸುತ್ತಾ ಸದನದಲ್ಲಿ ಸಚಿವರಿಲ್ಲ. ಇದ್ದ ಒಬ್ಬ ಸಚಿವರು ಎದ್ದು ಹೊರ ನಡೆದಿದ್ದಾರೆ.ಒಬ್ಬಳೇ ಪದಾವತಿ ಎನ್ನುವಂತಾಗಿದೆ ಎಂದು ಆಕ್ಷೇಪಿಸಿದರು.ಆಗ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಸರ್ಕಾರದ ಕಾರ್ಯಕಲಾಪಗಳು ನಡೆಯಲು ಅವಕಾಶ ಮಾಡಿಕೊಡಿ ಎಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು. ಆ ಸಂದರ್ಭದಲ್ಲಿ ಮಾತನಾಡಿದ…

Read More

ತೊಟ್ಟಿಲು ತೂಗುವ ಕೈ ದೇಶವನ್ನೇ ಆಳಬಲ್ಲದು: ಡಾ. ರಂಜಿತಾ

ವೀರಮಾರ್ಗ ನ್ಯೂಸ್ ಗದಗ : ಲಕ್ಷ್ಮೇಶ್ವರ ಇಲ್ಲಿನ ಅಕ್ಕಮಹಾದೇವಿ ದೇವಸ್ಥಾನದಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು, ತಾಲ್ಲೂಕು ಕದಳಿ ಮಹಿಳಾ ವೇದಿಕೆ ಇವರ ಆಶ್ರಯದಲ್ಲಿ ಅಂತರರಾಷ್ಟ್ರಿಯ ಮಹಿಳಾ ದಿನ ಆಚರಿಸಲಾಯಿತು.ಡಾ.ರಂಜಿತಾ ಎನ್. ಮಲ್ಲಾಡದ ಮಾತನಾಡಿ, ಇಂದು ಎಲ್ಲ ಕ್ಷೇತ್ರಗಳಲ್ಲೂ ಮಹಿಳೆ ತನ್ನ ಹೆಜ್ಜೆ ಮೂಡಿಸುತ್ತಿದ್ದಾಳೆ. ತೊಟ್ಟಿಲು ತೂಗುವ ಕೈ ದೇಶವನ್ನೇ ಆಳಬಲ್ಲದು ಎಂಬುದಕ್ಕೆ ಇಂದಿನ ಮಹಿಳೆಯರು ಸಾಕ್ಷಿ ಆಗಿದ್ದಾರೆ. ಆದರೆ ಆಕೆ ಸಾಧನೆ ಮಾಡಲು ಪ್ರೋತ್ಸಾಹ ಅಗತ್ಯ. ಕುಟುಂಬದ ಸದಸ್ಯರು ಅವಳಿಗೆ ಆಸರೆಯಾಗಿ ನಿಂತರ ಎಂಥ ಕೆಲಸವನ್ನಾದರೂ…

Read More

ಕಿಲ್ಲಾ ಚಂದ್ರಸಾಲಿ ಸರಕಾರಿ ಕಾಮ-ರತಿ ಉತ್ಸವವನ್ನು ಶಾಂತತೆಯಿಂದ ಆಚರಿಸಬೇಕು : ಸಿಪಿಐ ಡಿ.ಬಿ. ಪಾಟೀಲ

ವೀರಮಾರ್ಗ ನ್ಯೂಸ್ ಗದಗ : ನಗರದ ಕಿಲ್ಲಾ ಚಂದ್ರಸಾಲಿಯ ಸರಕಾರಿ ಕಾಮ-ರತಿ ಉತ್ಸವವು ಗದಗ ಜಿಲ್ಲೆಗೆ ಕಿರೀಟ ಇದ್ದ ಹಾಗೆ ನವಲಗುಂದದ ರಾಮಲೀಂಗೇಶ್ವರ ಕಾಮ-ರತಿ ಉತ್ಸವ ನಂತರ ಅತಿ ಹೆಚ್ಚು ಪ್ರಸಿದ್ದಿ ಪಡದಿರುವ ಕಾಮ-ರತಿ ಉತ್ಸವ ಇದಾಗಿದೆ ಎಂದು ಗದಗ ಶಹರ ಪೊಲೀಸ್ ಠಾಣೆಯ ಸಿಪಿಐ ಡಿ.ಬಿ. ಪಾಟೀಲ ಅವರು ಹೇಳಿದರು.ನಗರದ ಕಿಲ್ಲಾ ಓಣಿಯ ತ್ರಿಕೂಟೇಶ್ವರ ದೇವಸ್ಥಾನದ ಉತ್ತರ ದಿಕ್ಕಿನ ದ್ವಾರದ ಆವರಣದಲ್ಲಿ 160ನೇ ವರ್ಷದ ಕಿಲ್ಲಾ ಚಂದ್ರಸಾಲಿಯ ಸರಕಾರಿ ಕಾಮ-ರತಿ ಉತ್ಸವ ಸಮಿತಿಯಿಂದ ಹಮ್ಮಿಕೊಂಡ ಶಾಂತಿ…

Read More