ಧರ್ಮ ದೀಪದ ಬೆಳಕಿನಿಂದ ಅಜ್ಞಾನ ದೂರ : ರಂಭಾಪುರಿಶ್ರೀ
ವೀರಮಾರ್ಗ ನ್ಯೂಸ್ ಹುಬ್ಬಳ್ಳಿ : ಮನುಷ್ಯ ಯಾವಾಗಲೂ ಆಶಾವಾದಿಯಾಗಿ ಬದುಕಬೇಕಲ್ಲದೇ ನಿರಾಶಾವಾದಿಗಳಾಗಬಾರದು. ಜೀವನದಲ್ಲಿ ಭರವಸೆ ಎಂಬ ದೀಪ ಎಂದಿಗೂ ಆರಬಾರದು. ಧರ್ಮ ದೀಪದ ಬೆಳಕಿನಿಂದ ಮನುಷ್ಯನ ಅಜ್ಞಾನ ದೂರವಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಶನಿವಾರ ತಾಲೂಕಿನ ತಿರುಮಲಕೊಪ್ಪ ಗ್ರಾಮ ವ್ಯಾಪ್ತಿಯಲ್ಲಿ ಬರುವ ಶ್ರೀ ಜಗದ್ಗುರು ರೇಣುಕ ಧರ್ಮ ನಿವಾಸದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಮಹಾರಥೋತ್ಸವ ಅಂಗವಾಗಿ ಜರುಗಿದ ಇಷ್ಟಲಿಂಗ ಮಹಾಪೂಜಾ ಮತ್ತು ಧರ್ಮ…