ಬಿಎನ್ಎಸ್ ಕಾಯ್ದೆಗಳ ಬಗ್ಗೆ ಕಾನೂನು ಅರಿವು
ವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಬಡವ ಬಲ್ಲಿದ ಎನ್ನದೆ ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ನಿತ್ಯ ಜೀವನಕ್ಕೆ ಬೇಕಾದ ಕಾನೂನಿನ ಸಾಮಾನ್ಯ ತಿಳುವಳಿಕೆ ಎಲ್ಲರಿಗೂ ಅಗತ್ಯವಾಗಿದೆ ಎಂದು ಮುಖ್ಯ ಪೇದೆ ಮಾಲತಿ ಶೀಗಿಹಳ್ಳಿ ಹೇಳಿದರು.
ಅವರು ಪಟ್ಟಣದ ಪುರಸಭೆಯ ಪದವಿ ಕಲಾ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಮುಖ್ಯವಾಗಿ ಮಹಿಳೆಯರಿಗಾಗಿ ಬಂದತಹ ಹೊಸ ಬಿಎನ್ಎಸ್ ಕಾಯ್ದೆಗಳ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಹೆಣ್ಣುಮಕ್ಕಳಿಗಾಗಿ ಅನೇಕ ಕಾನೂನುಗಳಿದ್ದು ಆ ಬಗ್ಗೆ ತಿಳಿದುಕೊಳ್ಳಬೇಕು ಮನೆಯ ಹತ್ತಿರ ಯಾವುದೆ ಕಾನೂನು ಬಾಹಿರ ಚಟುವಟಿಕೆ ನಡೆದರೆ ೧೧೨ ನಂಬರ್ ಕರೆ ಮಾಡಬೇಕು ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಬಿಎನ್ಎಸ್ ೬೪ ಅಡಿಯಲ್ಲಿ ದೂರು ದಾಖಲು ಆಗಿತ್ತಿದ್ದು ಮನೆಯಲ್ಲಿ ಬಾಲ್ಯ ವಿವಾಹ ಯತ್ನಿಸಿದಾಗ ಅದನ್ನು ತಡೆಯಬೇಕು, ಪೋಕ್ಸ ಕಾಯ್ದೆ ಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು, ಇತ್ತೀಚಿನ ದಿನಗಳಲ್ಲಿ ಸೈಬರ ಅಪರಾದಗಳ ಬಗ್ಗೆ ವಿದ್ಯಾರ್ಥಿಗಳು ಜಾಗೃತಿ ವಹಿಸಬೇಕು ಎಂದು ಕರೆ ನೀಡಿದರು.
ಇನ್ನೊರ್ವ ಮುಖ್ಯ ಪೇದೆ ರಾಜು ಯರಗಟ್ಟಿ ಮಾತನಾಡಿ ಜನ ಸಾಮಾನ್ಯರಿಗೆ ಅನೇಕ ಕಾನೂನಿನ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಅನೇಕ ಘಟನೆಗಳಿಗೆ ಕಾರಣವಾಗುತ್ತಿದ್ದಾರೆ. ಕಾನೂನುಗಳ ಬಗ್ಗೆ ಸಾಮಾನ್ಯ ತಿಳುವಳಿಕೆ ಬಂದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಬಹುದಾಗಿದೆ. ಅದರಲ್ಲೂ ಮಹಿಳೆಯರಿಗೆ ವಿಶೇಷ ಕಾನೂನುಗಳಿದ್ದು ವಿದ್ಯಾರ್ಥಿನಿಯರು ಅದನ್ನು ತಿಳಿದುಕೊಂಡು ಸಮರ್ಪಕವಾಗಿ ಉಪಯೋಗಿಸಿಕೊಂಡು ಜಾಗೃತಿ ಮೂಡಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಪ್ರೋ ವ್ಹಿ.ಎನ್. ನಾಗಶೆಟ್ಟಿ, ಮುಖ್ಯ ಪೊಲೀಸ್ ಪೇದೆ ಚನ್ನಬಸಯ್ಯ ಮಠಪತಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
