ಕಣ್ಣಿಗೆ ಖಾರದಪುಡಿ ಎರಚಿ ಒಂದೇ ಕುಟುಂಬದವರ ಬರ್ಬರ ಹತ್ಯೆ!
ವೀರಮಾರ್ಗ ನ್ಯೂಸ್ : ವಿಜಯಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಹಳೆಯ ಆಸ್ತಿ ವಿವಾದ ಹಾಗೂ ವೈಷಮ್ಯದ ಹಿನ್ನೆಲೆಯಲ್ಲಿ, ದುಷ್ಕರ್ಮಿಗಳ ತಂಡವೊಂದು ಕಣ್ಣಿಗೆ ಖಾರದ ಪುಡಿ ಎರಚಿ, ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಕುಟುಂಬದ ಆರು ಜನರನ್ನು ಬರ್ಬರವಾಗಿ ಕೊಲೆ ಮಾಡಿದೆ. ಈ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಭೀಮಾ ನದಿ ತೀರದ ಗೋವಿಂದಪುರ ಗ್ರಾಮದಲ್ಲಿ ನಡೆದಿದ್ದು, ಇಡೀ ಜಿಲ್ಲೆಯನ್ನು ನಡುಗಿಸಿದೆ. ಚಡಚಣ ಪಟ್ಟಣದ ಒಂದೇ ಕುಟುಂಬಕ್ಕೆ ಸೇರಿದ ದುಂಡಪ್ಪ ನಿರಾಳೆ (65), ಶಿವಪುತ್ರ ನಿರಾಳೆ…