ಪ್ರಯತ್ನ ಪರಿಶ್ರಮದಿಂದ ಪ್ರಗತಿ ಸಾಧ್ಯ : ರಂಭಾಪುರಿಶ್ರೀ
ಪ್ರಯತ್ನ ಪರಿಶ್ರಮದಿಂದ ಪ್ರಗತಿ ಸಾಧ್ಯ : ರಂಭಾಪುರಿಶ್ರೀವೀರಮಾರ್ಗ ನ್ಯೂಸ್ ಕಲಬುರ್ಗಿ : ಬಾಳಿನ ಭಾಗ್ಯೋದಯಕ್ಕೆ ಆದರ್ಶ ಮೌಲ್ಯಗಳ ಪರಿಪಾಲನೆ ಬೇಕು. ಗಳಿಸಿದ ಸಂಪತ್ತು ಸತ್ಕಾರ್ಯಗಳಿಗೆ ಸಲ್ಲಬೇಕು. ನಿರಂತರ ಪ್ರಯತ್ನ ಮತ್ತು ಪರಿಶ್ರಮದಿಂದ ಅದ್ಭುತ ಪ್ರಗತಿ ಕಾರ್ಯ ಮಾಡಲು ಸಾಧ್ಯವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಶುಕ್ರವಾರ ತಾಲೂಕಿನ ಬಬಲಾದ(ಎಸ್) ಗ್ರಾಮದ ಶ್ರೀಮದ್ ರಂಭಾಪುರಿ ಖಾಸಾ ಶಾಖಾ ಶ್ರೀ ಮಲ್ಲಿಕಾರ್ಜುನ ಬೃಹನ್ಮಠದ 61ನೇ ಜಾತ್ರಾ ಮಹೋತ್ಸವ ಹಾಗೂ ಸಿದ್ಧಶ್ರೀ ಸಭಾ ಭವನ ಲೋಕಾರ್ಪಣೆ ಅಂಗವಾಗಿ ಜರುಗಿದ…