ಡಿಕೆಶಿ ಆಪ್ತ ಶಾಸಕನ ವಿರುದ್ಧ ರಾಜೇಂದ್ರ ರಾಜಣ್ಣ ಸ್ಫೋಟಕ ಹೇಳಿಕೆ..!
ವೀರಮಾರ್ಗ ನ್ಯೂಸ್ : ತುಮಕೂರು : ಸಹಕಾರ ಸಚಿವ ಕೆ.ಎನ್. ರಾಜಣ್ಣ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮೊದಲಿನಿಂದಲೂ ಒಳಗೊಳಗೆ ಹಲ್ಲು ಮಸೆಯುತ್ತಿದ್ದು, ಆಗಾಗ್ಗೆ ಬಹಿರಂಗ ಹೇಳಿಕೆಗಳ ಮೂಲಕ ಅಸಮಾಧಾನ ಸ್ಫೋಟಗೊಳ್ಳುತ್ತಲೇ ಇದೆ. ಈಗ ರಾಜಣ್ಣ ಅವರ ಪುತ್ರ ರಾಜೇಂದ್ರ ರಾಜಣ್ಣ ಅವರು ಡಿ.ಕೆ.ಶಿವಕುಮಾರ್ರವರ ಆಪ್ತ ಶಾಸಕನ ವಿರುದ್ಧಸ್ಫೋಟಕ ಹೇಳಿಕೆ ನೀಡುವ ಮೂಲಕ ಮತ್ತೊಂದು ಅಸಮಾಧಾನಕ್ಕೆ ಮುನ್ನುಡಿ ಬರೆದಿದ್ದಾರೆ. ಕೆ.ಎನ್.ರಾಜಣ್ಣ ಅವರ ಪುತ್ರ ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಬಹಿರಂಗ ಹೇಳಿಕೆ ನೀಡುವ ಮೂಲಕ ಕುಣಿಗಲ್ ಕ್ಷೇತ್ರದ ಶಾಸಕ…