ಹಿರಿಯ ನಟ ಬ್ಯಾಂಕ್ ಜನಾರ್ದನ್ ವಿಧಿವಶ ಗಣ್ಯರ ಕಂಬನಿ
ಹಿರಿಯ ನಟ ಬ್ಯಾಂಕ್ ಜನಾರ್ದನ್ ವಿಧಿವಶ ಗಣ್ಯರ ಕಂಬನಿವೀರಮಾರ್ಗ ನ್ಯೂಸ್ ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್ (೭೬) ವಿಧಿವಶರಾಗಿದ್ದಾರೆ. ಮಧ್ಯರಾತ್ರಿ ೨.೩೦ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು ,ಚಿತ್ರರಂಗದ ಆನೇಕ ಗಣ್ಯರು ನಟನ ಅಂತಿಮ ದರ್ಶನ ಪಡೆದರು.ಹಲವು ವರ್ಷಗಳಿಂದಲೂ ಹಾಸಿಗೆ ಹಿಡಿದಿದ್ದ ಬ್ಯಾಂಕ್ ಜನಾದನ್ , ಇತ್ತೀಚಿನ ದಿನಗಳಲ್ಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಅವರನ್ನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬ್ಯಾಂಕ್ ಜನಾದನ್ ಸಾವನ್ನಪ್ಪಿದ್ದಾರೆ.ಈ ಹಿಂದೆ…