ಚಳ್ಳಕೆರೆಯಲ್ಲಿ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ
ವೀರಮಾರ್ಗ ನ್ಯೂಸ್ : ಚಳ್ಳಕೆರೆ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ನಗರದ ಕನಕ ವೃತ್ತದಿಂದ ಅಭಿಯಾನಕ್ಕೆ ಚಾಲನೆ ನೀಡಿ ಮಹರ್ಷಿ ವಾಲ್ಮೀಕಿ ವೃತ್ತ, ಅಂಬೇಡ್ಕರ್ ವೃತ್ತ, ನೆಹರೂ ವೃತ್ತ,ಹೊಸ ಬಸ್ ನಿಲ್ದಾಣ, ಮೂಲಕ ಸಾಗಿ ಕೃಷಿ ಮಾರುಕಟ್ಟೆಯ ವರೆಗೆ ಅಭಿಯಾನ ಮಾಡಿ ಜನ ಜಾಗೃತಿ,ಹಾಗೂ ಪಕ್ಷದ ಸದಸ್ಯತ್ವ ಮಾಡುವ ಮೂಲಕ ದೇಣಿಗೆ ಸಂಗ್ರಹಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ವೀರಭದ್ರಪ್ಪ ಅವರು ಇತ್ತೀಚಿನ ದಿನಗಳಲ್ಲಿ ಕನ್ನಡಿಗರು ಅನುಭವಿಸುತ್ತಿರುವ ನೋವುಗಳಿಗೆ,ಕಷ್ಟ ಕಾರ್ಪಣ್ಯಗಳಿಗೆ ನಮ್ಮನ್ನು ಆಳುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳು ನೇರವಾಗಿ ಕಾರಣ.ಅವರವರ ಸ್ವಾರ್ಥದ ಮತ್ತು ಕುಟುಂಬದ ರಾಜಕಾರಣದಲ್ಲಿ ತಾಲೂಕಿನ ಜನರನ್ನು ಮೂರ್ಖರನ್ನಾಗಿ ಮಾಡಿ ಜನರನ್ನು ವಂಚಿಸುತ್ತಿದ್ದಾರೆ ಜನಪರವಾದ ಆಡಳಿತ ನಡೆಸಬೇಕಾದ ಪಕ್ಷಗಳು ಜಾತಿ ರಾಜಕಾರಣ,ಹಣಬಲದ ರಾಜಕಾರಣದಲ್ಲಿ ತೊಡಗಿಸಿಕೊಂಡಿವೆ ಹಾಗಾಗಿ ನಮ್ಮ ಪಕ್ಷವು ಕನ್ನಡ ನಾಡಿನ ನೆಲ,ಜಲ,ಗಡಿ ಭಾಷೆಯ ಉಳಿವಿಗಾಗಿ ಮತ್ತು ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡುವಿಕೆಗಾಗಿ ಒತ್ತಾಯಿಸಿ ಮುಂದಿನ ನವಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಒಂದು ದೊಡ್ಡ ಸಮಾವೇಶ ಆಯೋಜಿಸಲಾಗುತ್ತಿದ್ದು ತಾಲೂಕಿನ ಸಮಸ್ತ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ ಮಾತನಾಡಿ ರೈತರಿಗೆ,ಮಹಿಳೆಯರಿಗೆ,ವಿದ್ಯಾರ್ಥಿಗಳಿಗೆ,ಕೃಷಿ ಕಾರ್ಮಿಕರಿಗೆ ಉತ್ತಮವಾದ ಜೀವನ ನಿರ್ವಹಣೆಗೆ ತಾಲೂಕಿನಲ್ಲಿ ಅನಾನುಕೂಲದ ವಾತಾವರಣ ನಿರ್ಮಾಣವಾಗಿದೆ ಈ ಎಲ್ಲಾ ಅವ್ಯವಸ್ಥೆಗಳನ್ನು ವಿರೋಧಿಸಿ ಪ್ರತಿಯೊಬ್ಬರು ಉತ್ತಮವಾದ ಜನ ಜೀವನ ಮಾಡುವಂತೆ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳು ಜನರಿಗೆ ತಲುಪಿಸಿ ಕನ್ನಡಿಗರನ್ನು ಜಾಗೃತಿ ಮೂಡಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದು ಇದಕ್ಕೆ ಕನ್ನಡಪರ,ರೈತಪರ,ಪ್ರಗತಿಪರ ಸಂಘಟನೆಗಳ ಮುಖಂಡರು,ನಾಯಕರು ಬೆಂಬಲಿಸಬೇಕೆಂದು ವಿನಂತಿಸಿದರು.
ಇದೇ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಸಮಿತಿ ಮಾಜಿ ಅಧ್ಯಕ್ಷರಾದ ನಾಗರಡ್ಡಿ, ತಾಲೂಕು ಅಧ್ಯಕ್ಷ ಎಮ್ ಕೃಷ್ಣಪ್ಪ,ಉಪಾಧ್ಯಕ್ಷ ಜಬಿವುಲ್ಲಾ,ಪ್ರಧಾನ ಕಾರ್ಯದರ್ಶಿ ಪಾಪಯ್ಯ,ಕಾರ್ಯದರ್ಶಿಗಳಾದ ಚಿತ್ತಯ, ಮಂಜುನಾಥ್, ಶ್ರೀನಿವಾಸ,ಅಂಜನಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಶ್ರೀಮತಿ ಪ್ರೇಮ,ಉಪಾಧ್ಯಕ್ಷರಾದ,ಮಮತಾ,ಪ್ರಧಾನ ಕಾರ್ಯದರ್ಶಿ ರೇಖಾ,ಕಾರ್ಯದರ್ಶಿಗಳಾದ ಲಲಿತಮ್ಮ,ಮಂಜುಳ,ಲಕ್ಷ್ಮೀ, ಅಂಜನಪ್ಪ ಹೊಳಲ್ಕೆರೆ,ಕೀರ್ತಿ ರಾಜ್,ಚಿತ್ರಲಿಂಗಯ್ಯ ಸೇರಿದಂತೆ ಅನೇಕರು ಭಾಗವಹಿಸಿದ್ದರು.