ವೀರಮಾರ್ಗ ನ್ಯೂಸ್ : ದಾವಣಗೆರೆ : ನೌಕರನೇ ತನ್ನ ಬ್ಯಾಂಕ್ ನ ಬರೋಬ್ಬರಿ 3 ಕೋಟಿ ಮೌಲ್ಯದ 3 ಕೆ.ಜಿಗೂ ಅಧಿಕ ಚಿನ್ನ ಕಳ್ಳತನ : ಆರೋಪಿ ಬಂಧನ
ದಾವಣಗೆರೆ ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ 3 ಕೆಜಿ 643 ಗ್ರಾಂ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ್ದ ಬ್ಯಾಂಕ್ ನೌಕರನ ಬಂಧನ ಮಾಲಾಗಿದ್ದು, 3 ಕೋಟಿಗೂ ಹೆಚ್ಚು ಮೌಲ್ಯದ ಬಂಗಾರದ ಆಭರಗಳು ವಶಕ್ಕೆ ಪಡೆಯಲಾಗಿದೆ.
ದೇವರಾಜ್ ಅರಸು ಬಡಾವಣೆ ಸಿ.ಎಸ್.ಬಿ. ಬ್ಯಾಂಕ್ ನಲ್ಲಿ ವಂಚನೆ
ದಿನಾಂಕ 22.04.2025 ರಂದು ದೇವರಾಜ್ ಅರಸು ಬಡಾವಣೆಯಲ್ಲಿ ಸಿ.ಎಸ್.ಬಿ. ಬ್ಯಾಂಕ್ ವ್ಯವಸ್ಥಾಪಕ ಶಿವಕುಮಾರ್.ಕೆ.ಬಿ ಅವರು ತಮ್ಮ ಬ್ಯಾಂಕಿನ ಗೋಲ್ಡ್ ಲೋನ್ ಆಫೀಸರ್ ಸಂಜಯ್ ಟಿ.ಪಿ. ಬ್ಯಾಂಕಿನ ಗ್ರಾಹಕರು ಅಡಮಾನ ಮಾಡಿದ ಸಾಲದ ಖಾತೆಗಳಲ್ಲಿನ ಒಟ್ಟು 1,86,22000/- ರೂ ಬೆಲೆ ಬಾಳುವ 3157.10 ಗ್ರಾಂ ತೂಕದ ಆಭರಣಗಳನ್ನು ನಮ್ಮ ಗಮನಕ್ಕೆ ಬಾರದ ಹಾಗೆ ಬ್ಯಾಂಕಿಗೆ ನಂಬಿಕೆ ದ್ರೋಹ ಮಾಡಿ ಕಳ್ಳತನ ಮಾಡಿಕೊಂಡು ಹೋಗಿ ಬ್ಯಾಂಕಿಗೆ ಮೋಸ ಮಾಡಿ ನಷ್ಟವುಂಟು ಮಾಡಿರುತ್ತಾನೆ. ಆರೋಪಿ ಸಂಜಯ್.ಟಿ.ಪಿ. ಪತ್ತೆ ಮಾಡಿ ನಮ್ಮ ಗ್ರಾಹಕರ ಬಂಗಾರದ ಆಭರಣಗಳನ್ನು ಪತ್ತೆ ಮಾಡಿ ಕೊಡಿ ಎಂದು ದೂರು ನೀಡಿದ ಮೇರೆಗೆ ಕೆ.ಟಿ.ಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಗೋಲ್ಡ್ ಲೋನ್ ಆಫೀಸರ್ ನಿಂದ ವಂಚನೆ…
ಈ ಪ್ರಕರಣದಲ್ಲಿ ಆರೋಪಿ ಹಾಗೂ ಮಾಲು ಪತ್ತೆಗಾಗಿ ಎಸ್ಪಿ ಮಉಮಾ ಪ್ರಶಾಂತ್, ಎಎಸ್ಪಿಗಳಾದ ವಿಜಯಕುಮಾರ್ ಎಂ. ಸಂತೋಷ್. ಮತ್ತು ಹೆಚ್ಚುವರಿ ಮಂಜುನಾಥ್. ಜಿ. ಹಾಗೂ ಡಿವೈಎಸ್ಪಿಗಳಾದ ಶರಣ ಬಸವೇಶ್ವರ.ಬಿ. ಪದ್ಮಶ್ರೀ ಗುಂಜಿಕರ್ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್.ಹೆಚ್.ಎಸ್ ಮತ್ತು ಅಧಿಕಾರಿ ಸಿಬ್ಬಂದಿಗಳನ್ನು ಒಳಗೊಂಡ ತಂ ರಚಿಸಲಾಗಿತ್ತು. ಈ ತಂಡ ವಿವಿಧ ಆಯಾಮಗಳಲ್ಲಿ ಕಾರ್ಯಚರಣೆ ನಡೆಸಿ ದಿನಾಂಕ 25.04.2025 ರಂದು ಪ್ರಕರಣದ.

ಆರೋಪಿ ಗೋಲ್ಡ್ ಲೋನ್ ಆಫೀಸರ್ ಸಂಜಯ್.ಟಿ.ಪಿ (35) ಸಿ.ಎಸ್.ಬಿ ಬ್ಯಾಂಕ್ ಉದ್ಯೋಗಿ, ದೇವರಾಜ್ ಅರಸ್ ಬಡಾವಣೆ ದಾವಣಗೆರೆ. ಇವನನ್ನು ವಶಕ್ಕೆ ಪಡೆದುಕೊಂಡು ಕೂಲಂಕುಷವಾಗಿ ವಿಚಾರಣೆ ಮಾಡಿದೆ. ಆರೋಪಿ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ಶಾಖೆಯಲ್ಲಿ ಕಳ್ಳತನ ಮಾಡಿಕೊಂಡು ಹೋಗಿದ್ದ ಬಂಗಾರದ ಆಭರಣಗಳನ್ನು ದಾವಣಗೆರೆ ನಗರದ ಪೆಡರಲ್ ಬ್ಯಾಂಕ್, ಫೆಡ್ ಬ್ಯಾಂಕ್ ಹಾಗೂ ಪಿ.ಬಿ.ರಸ್ತೆಯಲ್ಲಿರುವ ಮಣಪ್ಪುರಂ ಗೋಲ್ಡ್ ಲೋನ್ ಪೈನಾನ್ಸ್ ಶಾಖೆಯಲ್ಲಿ ಅಡಮಾನ ಮಾಡಿದ್ದನು. ಕೆ.ಟಿಜೆ ನಗರ ಪೊಲೀಸ್ ಠಾಣೆ ಪ್ರಕರಣದಲ್ಲಿ ಕಳ್ಳತನವಾದ ಸುಮಾರು 3 3643 (38.2 643 ) ಚಿನ್ನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ನೇಮಕ ಮಾಡಿಕೊಳ್ಳುವಾಗ ಎಚ್ಚರ ವಹಿಸಿ
ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳು ತಮ್ಮ ಬ್ಯಾಂಕ್ ಗಳಿಗೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವಾಗ ಅವರ ಅಪರಾಧಿಕ ಹಿನ್ನೆಲೆಯ ಬಗ್ಗೆ ಪೂರ್ವಪರ ಪರಿಶೀಲಿಸಿ ನೇಮಕ ಮಾಡಿಕೊಳ್ಳಲು ಸೂಚಿಸಿರುತ್ತಾರೆ.

ಸದರಿ ಪ್ರಕರಣದಲ್ಲಿ ಆರೋಪಿತನ ಪತ್ತೆ ಹಾಗೂ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ತಂಡವನ್ನು ಉಮಾಪ್ರಶಾಂತ್ ಶ್ಲಾಘಿಸಿದ್ದಾರೆ.